Lakshmi Hebbalkar: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದ ಸಭೆಗೆ ಪಾಲ್ಗೊಳ್ಳಲು ಬಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆತ್ಮವಿಶ್ವಾಸದಿಂದ ಬೀಗುತ್ತಿದ್ದರು!
ಒಂದೇ ಮನೆಯಲ್ಲಿ ಅತ್ತೆ ಸೊಸೆ ವಾಸವಾಗಿದ್ದರೆ, ಫಲಾನುಭವಿ ಯಾರಾಗುತ್ತಾರೆ ಅನ್ನೋದು ಮಿಲಿಯನ್ ಡಾಲರ್ ಪ್ರಶ್ನೆಯಾಗಿ ಉದ್ಭವಿಸಿದೆ.
ಬೆಂಗಳೂರು: ಸಚಿವರಾದ ಬಳಿಕ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರ ಗತ್ತು ಬದಲಾಗಿದ್ದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಅವರ ನಡಿಗೆಯಲ್ಲಿ ಆತ್ಮವಿಶ್ವಾಸ ಎದ್ದುಕಾಣುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ಕರೆದಿರುವ ಸಭೆಯಲ್ಲಿ ಪಾಲ್ಗೊಳ್ಳಲು ಮಹಿಳೆ ಮತ್ತು ಮಕ್ಕಳ ಕಲ್ಯಾಣ ಖಾತೆ (Women and Child Welfare) ಸಚಿವೆ ತಮ್ಮ ಕಾರಲ್ಲಿ ವಿಧಾನಸೌಧಕ್ಕೆ ಆಗಮಿಸಿದರು. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಎದ್ದಿರುವ ಗೊಂದಲಗಳನ್ನು ನಿವಾರಿಸಲು ಮುಖ್ಯಮಂತ್ರಿ ಸಭೆ ಕರೆದಿದ್ದಾರೆ. ಈ ಯೋಜನೆ ಹೆಬ್ಬಾಳ್ಕರ್ ನಿರ್ವಹಿಸುತ್ತಿರುವ ಖಾತೆಯ ವ್ಯಾಪ್ತಿಗೆ ಬರೋದ್ರಿಂದ ಸಭೆಯಲ್ಲಿ ಅವರ ಉಪಸ್ಥಿತಿ ಅತ್ಯಾವಶ್ಯಕವಾಗಿದೆ. ಒಂದೇ ಮನೆಯಲ್ಲಿ ಅತ್ತೆ ಸೊಸೆ ವಾಸವಾಗಿದ್ದರೆ, ಫಲಾನುಭವಿ ಯಾರಾಗುತ್ತಾರೆ ಅನ್ನೋದು ಮಿಲಿಯನ್ ಡಾಲರ್ ಪ್ರಶ್ನೆಯಾಗಿ ಉದ್ಭವಿಸಿದೆ. ಹಲವಾರು ಮನೆಗಳಲ್ಲಿ ಜಗಳಗಳು ಶುರುವಾಗಿರುವ ವದಂತಿಗಳೂ ಇವೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ

