Jarkiholi Vs Hebbalkar: ಶಾಸಕಿಯೇ ಮೈದಾನ ಖುಲ್ಲಾ ಹೈ ಅಂತ ಸವಾಲೆಸುದಿರುವುದರಿಂದ ಮೈದಾನಕ್ಕಿಳಿದಿರುವೆ: ರಮೇಶ್ ಜಾರಕಿಹೊಳಿ

ಅರುಣ್​ ಕುಮಾರ್​ ಬೆಳ್ಳಿ

Updated on: Mar 06, 2023 | 11:02 AM

ಖುದ್ದು ಶಾಸಕಿಯೇ ಮೈದಾನ್ ಖುಲ್ಲಾ ಹೈ ಅಂತ ಸವಾಲೆಸೆದಿರುವುದರಿಂದ ತಾವು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುವುದಾಗಿ ಅವರು ಹೇಳಿದರು.

ಬೆಳಗಾವಿ: ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ನಗರದ ರಾಜಹಂಸಗಢ್ ನಲ್ಲಿ ನಿರ್ಮಿಸಲಾಗಿರುವ ಮತ್ತು ಈಗಾಗಲೇ ಲೋಕಾರ್ಪಣೆ ಮಾಡಿರುವ ಶಿವಾಜಿ ಪ್ರತಿಮೆಯನ್ನು ಮತ್ತೊಮ್ಮೆ ಅನಾವರಣ ಮಾಡಿದ್ದು ಮುಖ್ಯಮಂತ್ರಿ ಬಸವರಾ ಎಸ್ ಬೊಮ್ಮಾಯಿ (Basavaraj S Bommai) ಅವರು ಹೇಳಿದ ಹಾಗೆ ಹಾಸ್ಯಾಸ್ಪದವೇ ಸರಿ. ಹೆಬ್ಬಾಳ್ಕರ್ ವಿರುದ್ಧ ಯುದ್ಧ ಸಾರಿರುವ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಅವರಿಗೆ ಮತ್ತಷ್ಟು ಅಸ್ತ್ರಗಳು ಸಿಕ್ಕಂತಾಗಿದೆ. ವಿಜಯ ಸಂಕಲ್ಪ ಯಾತ್ರೆ ಬೆಳಗಾವಿ ಜಿಲ್ಲೆಯಲ್ಲಿ ನಡೆಯುತ್ತಿರುವುದರಿಂದ ಉತ್ಸಾಹಿತರಾಗಿರುವ ರಮೇಶ್ ಜಾರಕಿಹೊಳಿ ಅವರು ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ, ಹೆಬ್ಬಾಳ್ಕರ್ ಒಬ್ಬ ಮಹಿಳೆ ಆಗಿರುವುದರಿಂದ ಎಚ್ಚರಿಕೆಯಿಂದ ಮಾತಾಡುತ್ತಿದ್ದೇನೆ ಎಂದರು. ಖುದ್ದು ಶಾಸಕಿಯೇ ಮೈದಾನ್ ಖುಲ್ಲಾ ಹೈ ಅಂತ ಸವಾಲೆಸುದುರರುವುದರಿಂದ ತಾವು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುವುದಾಗಿ ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 06, 2023 10:20 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.