Belagavi: ಅಶೋಕ್ ಮಣ್ಣಿಕೇರಿ ಅಂತಿಮ ದರ್ಶನ ಪಡೆದ ಲಕ್ಷ್ಮಿ ಹೆಬ್ಬಾಳ್ಕರ್, ಕುಟುಂಬದ ಸದಸ್ಯರನ್ನು ಸಂತೈಸಿದರು

Updated on: Jun 29, 2023 | 5:53 PM

ಅಲ್ಲಿಗೆ ತೆರಳುವ ಮೊದಲು ಸಚಿವೆ ಟ್ವೀಟ್ ಮೂಲಕ ಅಶೋಕ್ ಸಾವಿಗೆ ಆಘಾತ ಮತ್ತು ದುಃಖ ಪ್ರಕಟಿಸಿದ್ದರು.

ಬೆಳಗಾವಿ: ತನಗೆ ಆಪ್ತರಾಗಿದ್ದ ಮತ್ತು ಮೊದಲ ಬಾರಿ ಶಾಸಕರಾಗಿದ್ದಾಗ ಅಪ್ತ ಸಹಾಯಕರಾಗಿ ಕೆಲಸ ಮಾಡಿದ್ದ ಅಶೋಕ್ ಮಣ್ಣಿಕೇರಿ (Ashok Mannikeri) ಆಕಸ್ಮಿಕ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಎಸಿ ಕಚೇರಿಯಲ್ಲಿ ಗ್ರೇಡ್-2 ತಹಸೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಶೋಕ್ ಕಳೆದ ರಾತ್ರಿ ಹೃದಯಾಘಾತದಿಂದ (heart attack) ಮರಣವನ್ನಪ್ಪಿದರು. ಅವರ ಪಾರ್ಥಿವ ಶರೀರದ ಅಂತಿನ ದರ್ಶನ ಪಡೆದ ಸಚಿವೆ ಲಕ್ಷ್ಮಿ ಕುಟುಂಬದ ಸದಸ್ಯರನ್ನು ಸಂತೈಸಿದರು. ಅಲ್ಲಿಗೆ ತೆರಳುವ ಮೊದಲು ಸಚಿವೆ ಟ್ವೀಟ್ ಮೂಲಕ ಅಶೋಕ್ ಸಾವಿಗೆ ಆಘಾತ ಮತ್ತು ದುಃಖ ಪ್ರಕಟಿಸಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More