ತುಮಕೂರು: ವಿಧಾನ ಸಭೆಯಲ್ಲಿ ಇಂದು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಕಾಂಗ್ರೆಸ್ ಪಕ್ಷದ ಹೆಚ್ಚಿನ ಸದಸ್ಯರು ಜಿಲ್ಲೆಯಲ್ಲಿರುವ ಸಿದ್ದಗಂಗಾ ಮಠಕ್ಕೆ ಶಿವಕುಮಾರ್ ಸ್ವಾಮೀಜಿ (Shivakumar Swamiji) ಗದ್ದುಗೆಯ ದರ್ಶನ ಪಡೆದರು. ಬೆಂಗಳೂರು ಗ್ರಾಮೀಣ (Belagavi Rural) ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಸಹ ಸ್ವಾಮೀಜಿ ಗದ್ದುಗೆ ದರ್ಶನ ಪಡೆದರು. ಗದ್ದುಗೆಗೆ ಪೂಜೆ ಸಲ್ಲಿಸಿದ ಬಳಿಕ ವಟುವೊಬ್ಬರು ಆರತಿ ತಟ್ಟೆ ತೆಗೆದುಕೊಂಡು ಬಂದಾಗ ಶಾಸಕಿ ತಟ್ಟೆಗೆ ರೂ. 500ರ ನೋಟ್ ಹಾಕುವುದನ್ನು ವಿಡಿಯೋದಲ್ಲಿ ನೋಡಬಹುದು. ಮಹಿಳಾ ಕೋಟಾದಡಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಮಂತ್ರಿ ಸ್ಥಾನ ಸಿಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Published On - 6:07 pm, Mon, 22 May 23