ಹಾಸನಾಂಬೆಯ ಮುಂದೆ ಹಚ್ಚಿಟ್ಟ ದೀಪ 365 ದಿನಗಳ ಕಾಲ ಅರದೆ ಉರಿಯುವುದು ಪವಾಡವೇ ಸರಿ: ಜಿಟಿ ದೇವೇಗೌಡ

ಅರುಣ್​ ಕುಮಾರ್​ ಬೆಳ್ಳಿ

Updated on: Oct 29, 2024 | 1:34 PM

ಚನ್ನಪಟ್ಟಣ ಉಪ ಚುನಾವಣೆಯ ಬಗ್ಗೆ ದೇವೇಗೌಡ ಅನ್ಯಮನಸ್ಕತೆಯಿಂದ ಮಾತಾಡಿದ್ದು ಆಶ್ಚರ್ಯ ಮೂಡಿಸುತ್ತದೆ, ಅಲ್ಲಿಯ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದುಕೊಂಡಿಲ್ಲ, ಯಾರು ಗೆಲ್ಲುತ್ತಾರೆ ಯಾರು ಸೋಲುತ್ತಾರೆ ಅಂತ ಗೊತ್ತಿಲ್ಲ, ಚುನಾವಣಾ ಪ್ರಚಾರಕ್ಕೆ ಹೋಗುವ ಕುರಿತು ಇನ್ನೂ ನಿರ್ಧಾರ ಮಾಡಿಲ್ಲ ಎಂದು ಅವರು ಹೇಳುತ್ತಾರೆ.

ಹಾಸನ: ಹಾಸನಂಬೆಯ ದರ್ಶನವನ್ನು ತಮ್ಮ ಬದುಕಿನಲ್ಲಿ ಎರಡನೇ ಸಲ ಮಾಡಿಕೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ದೇಗುಲದ ಬಾಗಿಲು ತೆರೆಯುವ ದೃಶ್ಯವನ್ನು ಸಹ ತಾನು ಟಿವಿಯಲ್ಲಿ ನೋಡಿ ಕಣ್ತುಂಬಿಕೊಂಡೆ ಎಂದರು. ದೇವಿಯ ಮುಂದೆ ಹಚ್ಚಿದ ದೀಪ 365ದಿನಗಳ ಕಾಲ ಆರದೆ ಉರಿಯುವುದು ಮತ್ತು ದೇವಿಗೆ ಹಾಕಿದ ಹಾರ ಬಾಡದಿರುವುದು ಪವಾಡವೇ ಸರಿ, ಮಲೆನಾಡಲ್ಲಿ ನೆಲೆಸಿರುವ ಈ ತಾಯಿ ನಾಡಿನ ಎಲ್ಲ ಜನತೆಗೆ ಸುಖ, ಶಾಂತಿ, ಸಮೃಧ್ಧಿ ಮತ್ತು ಅರೋಗ್ಯವನ್ನು ದಯಪಾಲಿಸಲಿ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಹಾಸನಾಂಬೆ ಸನ್ನಿಧಿಯಲ್ಲಿ ಆಕರ್ಷಕ ಬೆಳಕಿನ ಚಿತ್ತಾರ: ಕಣ್ತುಂಬಿಕೊಂಡ ಭಕ್ತಸಾಗರ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.