ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!

Updated on: Jul 07, 2025 | 9:32 PM

ರುದ್ರಪ್ರಯಾಗ ಮತ್ತು ಉತ್ತರಾಖಂಡದ ಪಕ್ಕದ ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ಅಲಕನಂದಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ನದಿ ಇನ್ನೂ ಅಪಾಯದ ಮಟ್ಟಕ್ಕಿಂತ ಕೆಳಗೆ ಹರಿಯುತ್ತಿದೆ. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಭಾನುವಾರ ಉತ್ತರಕಾಶಿ ಜಿಲ್ಲೆಯ ಯಮುನೋತ್ರಿ ರಸ್ತೆಯ ಉದ್ದಕ್ಕೂ ವಿಸ್ತರಿಸಿರುವ ವಿಪತ್ತು ಪೀಡಿತ ಸಿಲೈ ಬ್ಯಾಂಡ್ ಮತ್ತು ಓಜ್ರಿ ಬ್ಯಾಂಡ್‌ನ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು. ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯ ಕೆಲವು ಭಾಗಗಳು ಕೊಚ್ಚಿಹೋಗಿ, ಯಾತ್ರಾ ಸ್ಥಳಕ್ಕೆ ಸಂಪರ್ಕ ಕಡಿತಗೊಂಡಿತ್ತು.

ಉತ್ತರಾಖಂಡ, ಜುಲೈ 7: ಇಂದು ಉತ್ತರಾಖಂಡದ (Uttarakhand Floods) ರುದ್ರಪ್ರಯಾಗ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಉತ್ತರಾಖಂಡದಾದ್ಯಂತ ಮುಂದಿನ 4 ದಿನಗಳವರೆಗೆ ವ್ಯಾಪಕ ಮಳೆಯಾಗುವ ಬಗ್ಗೆ ಭಾರತ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಐಎಂಡಿ ಪ್ರಕಾರ, ಉತ್ತರಕಾಶಿ, ತೆಹ್ರಿ, ಬಾಗೇಶ್ವರ, ಡೆಹ್ರಾಡೂನ್ ಮತ್ತು ರುದ್ರಪ್ರಯಾಗ ಜಿಲ್ಲೆಗಳು ಪರಿಣಾಮ ಬೀರುವ ಸಾಧ್ಯತೆ ಇದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯು ಭೂಕುಸಿತ, ರಸ್ತೆ ತಡೆ ಮತ್ತು ಹಠಾತ್ ಪ್ರವಾಹದ ಅಪಾಯವನ್ನುಂಟುಮಾಡುತ್ತದೆ, ವಿಶೇಷವಾಗಿ ಬೆಟ್ಟ ಪ್ರದೇಶಗಳಲ್ಲಿ ಆತಂಕ ಹೆಚ್ಚಾಗಿದೆ. ಈ ನಡುವೆ ಸಿವಾಯ್ ಗ್ರಾಮದಲ್ಲಿ ಭಾರೀ ಪ್ರವಾಹದಿಂದ ರಸ್ತೆಗಳೇ ಮಾಯವಾಗಿದ್ದು, ಜೆಸಿಬಿ ಕಾರ್ಯಾಚರಣೆ ನಡೆಯುತ್ತಿದೆ.

ರುದ್ರಪ್ರಯಾಗ ಮತ್ತು ಉತ್ತರಾಖಂಡದ ಪಕ್ಕದ ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ಅಲಕನಂದಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ನದಿ ಇನ್ನೂ ಅಪಾಯದ ಮಟ್ಟಕ್ಕಿಂತ ಕೆಳಗೆ ಹರಿಯುತ್ತಿದೆ. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಭಾನುವಾರ ಉತ್ತರಕಾಶಿ ಜಿಲ್ಲೆಯ ಯಮುನೋತ್ರಿ ರಸ್ತೆಯ ಉದ್ದಕ್ಕೂ ವಿಸ್ತರಿಸಿರುವ ವಿಪತ್ತು ಪೀಡಿತ ಸಿಲೈ ಬ್ಯಾಂಡ್ ಮತ್ತು ಓಜ್ರಿ ಬ್ಯಾಂಡ್‌ನ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು. ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯ ಕೆಲವು ಭಾಗಗಳು ಕೊಚ್ಚಿಹೋಗಿ, ಯಾತ್ರಾ ಸ್ಥಳಕ್ಕೆ ಸಂಪರ್ಕ ಕಡಿತಗೊಂಡಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More