ಉತ್ತರ ಪ್ರದೇಶದ ಕಲ್ಲು ಗಣಿಗಾರಿಕೆ ವೇಳೆ ಭೂಕುಸಿತವಾಗಿ ಓರ್ವ ಸಾವು; ಹಲವು ಕಾರ್ಮಿಕರು ಕಣ್ಮರೆ
ಉತ್ತರ ಪ್ರದೇಶದ ಸೋನಭದ್ರದಲ್ಲಿ ಕಲ್ಲು ಗಣಿಗಾರಿಕೆಯ ವೇಳೆ ಸಂಭವಿಸಿದ ಭೂಕುಸಿತದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಈ ವೇಳೆ ಹಲವಾರು ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ಈ ಘಟನೆ ನಡೆದಾಗ ಸುಮಾರು 12ರಿಂದ 15 ಕಾರ್ಮಿಕರು ಸ್ಥಳದಲ್ಲಿದ್ದರು ಮತ್ತು ಯಾರೂ ತಕ್ಷಣ ಈ ಅವಘಡದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಒಬ್ಬ ಕಾರ್ಮಿಕನ ಮೃತದೇಹ ಪತ್ತೆಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಸೋನಭದ್ರ, ನವೆಂಬರ್ 15: ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದ ಕಲ್ಲು ಗಣಿಗಾರಿಕೆಯ (stone quarry) ಒಂದು ಭಾಗ ಕುಸಿದ ನಂತರ ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ದಲಾ ಪ್ರದೇಶದಲ್ಲಿರುವ ಕಲ್ಲು ಗಣಿಗಾರಿಕೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಬೆಟ್ಟದ ಇಳಿಜಾರಿನಿಂದ ದೊಡ್ಡ ಬಂಡೆಯೊಂದು ಇದ್ದಕ್ಕಿದ್ದಂತೆ ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಿದ್ದು, ಅವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ.
ಈ ಘಟನೆ ನಡೆದಾಗ ಸುಮಾರು 12ರಿಂದ 15 ಕಾರ್ಮಿಕರು ಸ್ಥಳದಲ್ಲಿದ್ದರು ಮತ್ತು ಯಾರೂ ತಕ್ಷಣ ಈ ಅವಘಡದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಒಬ್ಬ ಕಾರ್ಮಿಕನ ಮೃತದೇಹ ಪತ್ತೆಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಗಣಿಗಾರಿಕೆ ಸ್ಥಳದಲ್ಲಿ ಕೆಲಸ ಮಾಡುವವರು 9 ಕಂಪ್ರೆಷನ್ ಯಂತ್ರಗಳನ್ನು ಬಳಸಿ ಬಂಡೆಯಲ್ಲಿ ರಂಧ್ರಗಳನ್ನು ಕೊರೆಯುತ್ತಿದ್ದಾಗ ಮೇಲಿನ ಬಂಡೆಯ ದೊಡ್ಡ ಭಾಗವು ಇದ್ದಕ್ಕಿದ್ದಂತೆ ಬಿರುಕು ಬಿಟ್ಟು ಕುಸಿದಿದೆ. ಇದರಿಂದ ಹಲವಾರು ಕಾರ್ಮಿಕರು ಅವಶೇಷಗಳ ಕೆಳಗೆ ಹೂತುಹೋಗಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್

