ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗ ಮಾರ್ಗದಿಂದಲೇ ಚಿಕಿತ್ಸೆ

Edited By:

Updated on: Jul 03, 2024 | 5:15 PM

ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿತವಾಗಿ ಇಬ್ಬರು ಕೂಲಿ ಕಾರ್ಮಿಕರು ಸಿಲುಕಿಕೊಂಡಿದ್ದರು. ಓರ್ವ ಕೂಲಿ ಕಾರ್ಮಿಕನ ರಕ್ಷಣೆ ಮಾಡಲಾಗಿದ್ದು, ಮತ್ತೊಬ್ಬನಿಗಾಗಿ ರಕ್ಷಣಾ ಕಾರ್ಯಚರಣೆ ನಡೆದಿದೆ. ಮಂಗಳೂರು ನಗರದ ಬಲ್ಮಠ ಎಂಬಲ್ಲಿ ದುರಂತ ಸಂಭವಿಸಿದೆ. ಸದ್ಯ ಕಾರ್ಮಿಕನ ಕೈ ಕಾಣುತ್ತಿರುವುದರೊಂದಿಗೆ ಕಾರ್ಯಾಚರಣೆ ಮಧ್ಯೆಯೇ ಜಿಲ್ಲಾ ಆರೋಗ್ಯಾಧಿಕಾರಿ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ.

ದಕ್ಷಿಣ ಕನ್ನಡ, ಜುಲೈ 03: ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು (landslide) ಇಬ್ಬರು ಕೂಲಿ ಕಾರ್ಮಿಕರು (Labourer) ಮಣ್ಣಿನಡಿ ಸಿಲುಕಿರುವಂತಹ ಘಟನೆ ಮಂಗಳೂರು ನಗರದ ಬಲ್ಮಠ ಎಂಬಲ್ಲಿ ಸಂಭವಿಸಿದೆ. ಎಸ್​ಡಿಆರ್​ಎಫ್​, ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಓರ್ವ ಕಾರ್ಮಿಕನ ರಕ್ಷಣೆ ಮಾಡಲಾಗಿದ್ದು, ಮತ್ತೋರ್ವನಿಗಾಗಿ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಎಸ್​ಡಿಆರ್​ಎಫ್ ತಂಡ ಕೊರೆದ ಸುರಂಗದಲ್ಲಿ  ಮಣ್ಣಿನಡಿ ಸಿಲುಕಿರುವ ಕಾರ್ಮಿಕ ಚಂದನ್ ಕೈ ಹೊರ ಭಾಗಕ್ಕೆ ಕಾಣಿಸಿದೆ. ಕಾರ್ಯಾಚರಣೆ ಮಧ್ಯೆಯೇ ಜಿಲ್ಲಾ ಆರೋಗ್ಯಾಧಿಕಾರಿ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ. ಪಲ್ಸ್ ಮೀಟರ್ ಮೂಲಕ ಆರೋಗ್ಯ ತಪಾಸಣೆ ಮಾಡಲಾಗಿದ್ದು, ರಕ್ತದೊತ್ತಡದ ಸಮಸ್ಯೆಯಿಂದ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಸದ್ಯ ಡ್ರಿಪ್ಸ್ ಹಾಗೂ ಆಕ್ಸಿಜನ್ ನೀಡುವ ಮೂಲಕ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ಬಳಸಿ ಚಿಕಿತ್ಸೆ ಮುಂದುವರಿದಿದೆ. ಕಳೆದ ಎರಡೂವರೆ ಗಂಟೆಯಿಂದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಮತ್ತು ಡಿ.ಸಿ ಮುಲ್ಲೈ ಮುಗಿಲನ್ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಘಟನೆ ಕುರಿತು‌ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರತಿಕ್ರಿಯಿಸಿದ್ದು, ಘಟನೆ ಮಧ್ಯಾಹ್ನ 12:30ಕ್ಕೆ ನಡೆದಿದೆ. ಎರಡು ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ಫ್ಲೈವುಡ್ ಮೇಲೆ ಮಣ್ಣು ಬಿದ್ದು ಅದರಡಿ ಸಿಲುಕಿಕೊಂಡಿದ್ದರು. ಫ್ಲೈ ವುಡ್ ಇದ್ದ ಕಾರಣ ಒಬ್ಬರನ್ನು ಸ್ವಲ್ಪ ಹೊತ್ತಿನಲ್ಲೇ ರಕ್ಷಣೆ ಮಾಡಿದ್ದೇವೆ. ರಕ್ಷಣೆ ಮಾಡಿದವರ ಆರೋಗ್ಯ ಸ್ಥಿರವಾಗಿದೆ. ಇನ್ನೊಬ್ಬರ ರಕ್ಷಣಾ ಕಾರ್ಯಾಚರಣೆಯು ನಡೆಯುತ್ತಿದೆ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Published on: Jul 03, 2024 05:12 PM
Follow Us
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More