ಕೊಡಗು ಮತ್ತೆ ತತ್ತರ, ಸ್ಥಳೀಯ ಆಡಳಿತ ನಿರುತ್ತರ – ಟಿವಿ9 ಡಿಜಿಟಲ್ ಲೈವ್ನಲ್ಲಿ ಚರ್ಚೆ
ಆಷಾಢದ ಮಳೆಗೆ ಮತ್ತೆ ಕೊಡಗು ತತ್ತರಿಸಿದೆ. ಮೊದಲು ಭೂಮಿ ಕಂಪಿಸಿ, ಮಳೆ ಜೋರಾದಂತೆ ಭೂ ಕುಸಿತವೂ ಆಗುತ್ತಿದೆ. ಈ ಕುರಿತಾದ ಚರ್ಚೆ ಇಂದಿನ ಟಿವಿ9 ಡಿಜಿಟಲ್ ಲೈವ್ನಲ್ಲಿ
ಆಷಾಢದ ಮಳೆಗೆ ಮತ್ತೆ ಕೊಡಗು ತತ್ತರಿಸಿದೆ. ಮೊದಲು ಭೂಮಿ ಕಂಪಿಸಿ, ಮಳೆ ಜೋರಾದಂತೆ ಭೂ ಕುಸಿತವೂ ಆಗುತ್ತಿದೆ. ಮಡಿಕೇರಿ (Madikeri) ತಾಲೂಕಿನ ತಾಳತ್ ಮನೆ ಗ್ರಾಮದ ಬಳಿಯ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ (National Highway) 275 ರಲ್ಲಿ ಮತ್ತೆ ಭೂಕುಸಿತ (Landslide) ಸಂಭವಿಸಿದೆ. ಗುತ್ತಿಗೆದಾರರು ಅವೈಜ್ಞಾನಿಕವಾಗಿ ರಸ್ತೆ ಬದಿ ಗುಡ್ಡ ಅಗೆದಿದ್ದ ಕಾರಣ ಭೂಕುಸಿತ ಸಂಭವಿಸಿದ್ದು, ಗುಡ್ಡದ ಮಣ್ಣು ರಸ್ತೆಗೆ ಕೊಚ್ಚಿ ಬಂದಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯಾಗಿದೆ.
ದಕ್ಷಿಣ ಕನ್ನಡ ಗಡಿಯಲ್ಲಿ ಕೊಡಗು ಭಾಗದಲ್ಲಿ ಭೂ ಕಂಪನಗಳ ಹಿನ್ನೆಲೆ 18 ಗ್ರಾಮಸ್ಥರು ಪ್ರಾಕೃತಿಕ ವಿಕೋಪ ಸಂಭವಿಸದಂತೆ ದೇವರ ಮೊರೆ ಹೋಗಿದ್ದಾರೆ. ಈ ಸಂಬಂಧ ತೋಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯದಲ್ಲಿ ಪೂಜೆ ನೆರವೇರಿಸಿದ್ದಾರೆ. ದೇವರಲ್ಲಿ ಭೂಕಂಪನ, ಭೂ ಕುಸಿತ, ಪ್ರವಾಹ ದಂತಹ ವಿಕೋಪ ಸಂಭವಿಸದಂತೆ ಬೇಡಿಕೆ ಇಟ್ಟಿದ್ದಾರೆ.
ಈ ಕುರಿತಾದ ಚರ್ಚೆಯನ್ನು ಆ್ಯಂಕರ್ ಚಂದ್ರಮೋಹನ್ ಇಂದಿನ ಟಿವಿ9 ಡಿಜಿಟಲ್ ಲೈವ್ನಲ್ಲಿ ನಡೆಸಿಕೊಡಲಿದ್ದಾರೆ. ಮಧ್ಯಾಹ್ನ 3.30 ಕ್ಕೆ ನಡೆಯುವ ಈ ಕಾರ್ಯಕ್ರಮಕ್ಕೆ ನಿಮಗೆ ಸ್ವಾಗತ. TV 9 Kannada Digital Live
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್

