Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ನಾಯಿಮರಿ ಪದ ಬಳಸಿ ತಮ್ಮ ಸಂಸ್ಕೃತಿ ಪ್ರದರ್ಶಿಸಿದ್ದಾರೆ: ಬಿ ಶ್ರೀರಾಮುಲು, ಸಾರಿಗೆ ಸಚಿವ

ಸಿದ್ದರಾಮಯ್ಯ ನಾಯಿಮರಿ ಪದ ಬಳಸಿ ತಮ್ಮ ಸಂಸ್ಕೃತಿ ಪ್ರದರ್ಶಿಸಿದ್ದಾರೆ: ಬಿ ಶ್ರೀರಾಮುಲು, ಸಾರಿಗೆ ಸಚಿವ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jan 04, 2023 | 11:40 AM

ತಮ್ಮ ಅವಹೇಳನಕಾರಿ ಪದಬಳಕೆಗೆ ಸಿದ್ದರಾಮಯ್ಯನವರು ಸಾರ್ವಜನಿಕವಾಗಿ ಮುಖ್ಯಮಂತ್ರಿಗಳ ಕ್ಷಮೆ ಕೇಳಬೇಕು ಎಂದು ಸಚಿವರು ಆಗ್ರಹಿಸಿದ್ದಾರೆ.

ಬಳ್ಳಾರಿ: ಇದನ್ನು ನಿರೀಕ್ಷಿಸಲಾಗಿತ್ತು. ಸಿದ್ದರಾಮಯ್ಯನವರು (Siddaramaiah) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ನಾಯಿಮರಿಗೆ ಹೋಲಿಸಿದ್ದು ಬಿಜೆಪಿ ನಾಯಕರನ್ನು ಕೆರಳಿಸಿದೆ. ಬಳ್ಳಾರಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತಾಡಿದ ಸಾರಿಗೆ ಸಚಿವ ಬಿ ಶ್ರೀರಾಮುಲು (B Sriramulu) ಅವರು ಒಬ್ಬ ಮಾಜಿ ಮುಖ್ಯಮಂತ್ರಿಯಾಗಿ ಮತ್ತು ವಿರೋಧ ಪಕ್ಷದ ನಾಯಕನಾಗಿ ಸಿದ್ದರಾಮಯ್ಯನವರು ತಮ್ಮ ಘನತೆಗೆ ತಕ್ಕುದಲ್ಲದ ರೀತಿಯಲ್ಲಿ ಮಾತಾಡಿ ತಮ್ಮ ಸಂಸ್ಕಾರವನ್ನು ಪ್ರದರ್ಶಿಸಿದ್ದಾರೆ ಎಂದು ಹೇಳಿದ್ದಾರೆ. ಸೋನಿಯಾ ಗಾಂಧಿ ಎದುರು ನೀವು ಬೆಕ್ಕು, ಇಲಿ, ನಾಯಿ, ಜಿರಲೆ ಥರ ಇರುತ್ತೀರಿ ಅಂತ ನಾವು ಹೇಳಬಹುದು, ಅದರೆ ಅದು ನಮ್ಮ ಸಂಸ್ಕೃತಿಯಲ್ಲ ಎಂದು ಶ್ರೀರಾಮುಲು ಕುಟುಕಿದ್ದಾರೆ. ತಮ್ಮ ಅವಹೇಳನಕಾರಿ ಪದಬಳಕೆಗೆ ಸಿದ್ದರಾಮಯ್ಯನವರು ಸಾರ್ವಜನಿಕವಾಗಿ ಮುಖ್ಯಮಂತ್ರಿಗಳ ಕ್ಷಮೆ ಕೇಳಬೇಕು ಎಂದು ಸಚಿವರು ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ