ಶ್ರಾವಣ ಮಾಸದ ಕೊನೆಯ ಶನಿವಾರ: ಚಿಕ್ಕ ಮಧುರೆ ಶನಿಮಹಾತ್ಮ ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ

Edited By:

Updated on: Aug 31, 2024 | 3:39 PM

ಕೊನೆಯ ಶ್ರಾವಣ ಶನಿವಾರ ಹಿನ್ನಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯಕ್ಕೆ ಭಕ್ತ ಸಾಗರ ಹರಿದು ಬಂದಿದೆ. ಕೊನೆಯ ಶ್ರಾವಣವಿರುವುದರಿಂದ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ಬೆಳಗಿನಿಂದಲೂ ಶನಿಮಹಾತ್ಮ ಸ್ವಾಮಿಗೆ ತೈಲಾಭಿಷೇಕ ಪಂಚಾಮೃತ ಅಭಿಷೇಕ ನಡೆಸಿ ವಿಶೇಷ ಪೂಜೆ ಮಾಡಲಾಗಿದೆ.

ದೇವನಹಳ್ಳಿ, ಆಗಸ್ಟ್​ 31: ಶ್ರಾವಣ (Shraavana) ಮಾಸದ ಕೊನೆಯ ಶನಿವಾರ ಹಿನ್ನೆಲೆ ದೇವಾಲಯಗಳಿಗೆ ಭಕ್ತರ ದಂಡು ಹರಿದು ಬರುತ್ತಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಕನಸವಾಡಿಯ ಚಿಕ್ಕ ಮಧುರೆ ಕ್ಷೇತ್ರದ ಶನಿಮಹಾತ್ಮ ದೇವಾಲಯಕ್ಕೆ ಭಕ್ತ ಸಾಗರ ಹರಿದು ಬಂದಿದೆ. ಇನ್ನು ಕೊನೆಯ ಶ್ರಾವಣ ಶನಿವಾರ ಹಿನ್ನೆಲೆ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿದೆ. ಬೆಳಗಿನಿಂದಲೂ ಶನಿಮಹಾತ್ಮ ಸ್ವಾಮಿಗೆ ತೈಲಾಭಿಷೇಕ ಪಂಚಾಮೃತ ಅಭಿಷೇಕ ನಡೆಸಿ ವಿಶೇಷ ಪೂಜೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಿಂದ ಸಾವಿರಾರು ಜನ ಭಕ್ತರು ಆಗಮಿಸಿ ದೇವರ ದರ್ಶನ ಪಡೆದುಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More