ಜಂತರ್ ಮಂತರ್ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ದೆಹಲಿಯ ಜಂತರ್ ಮಂತರ್ನಲ್ಲಿ ತಡರಾತ್ರಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ತೀವ್ರ ಘರ್ಷಣೆ ನಡೆದಿದೆ. ಮಧ್ಯರಾತ್ರಿಯವರೆಗೂ ಮುಂದುವರೆದ ಈ ಜಟಾಪಟಿಯಲ್ಲಿ, ಪ್ರತಿಭಟನಾ ನಿರತ ಯುವಕರು ಆರ್ಎಎಫ್ ಸಿಬ್ಬಂದಿಯನ್ನೇ ಅಟ್ಟಾಡಿಸಿ ಹಲ್ಲೆ ನಡೆಸಿದ್ದಾರೆ.. ಕೆಲವರು ಆರ್ಎಎಫ್ ಸಿಬ್ಬಂದಿಯನ್ನು ನೆಲಕ್ಕೆ ಕೆಡವಿ ಕಾಲಿನಲ್ಲಿ ಒದ್ದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಘಟನೆ ಜಂತರ್ ಮಂತರ್ನಲ್ಲಿ ರಾತ್ರಿಯಿಡೀ ಕೋಲಾಹಲಕ್ಕೆ ಕಾರಣವಾಯಿತು.
ನವದೆಹಲಿ, ಜುಲೈ 22: ದೆಹಲಿಯ ಜಂತರ್ ಮಂತರ್ನಲ್ಲಿ ತಡರಾತ್ರಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ತೀವ್ರ ಘರ್ಷಣೆ ನಡೆದಿದೆ. ಮಧ್ಯರಾತ್ರಿಯವರೆಗೂ ಮುಂದುವರೆದ ಈ ಜಟಾಪಟಿಯಲ್ಲಿ, ಪ್ರತಿಭಟನಾ ನಿರತ ಯುವಕರು ಆರ್ಎಎಫ್ ಸಿಬ್ಬಂದಿಯನ್ನೇ ಅಟ್ಟಾಡಿಸಿ ಹಲ್ಲೆ ನಡೆಸಿದ್ದಾರೆ.. ಕೆಲವರು ಆರ್ಎಎಫ್ ಸಿಬ್ಬಂದಿಯನ್ನು ನೆಲಕ್ಕೆ ಕೆಡವಿ ಕಾಲಿನಲ್ಲಿ ಒದ್ದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಘಟನೆ ಜಂತರ್ ಮಂತರ್ನಲ್ಲಿ ರಾತ್ರಿಯಿಡೀ ಕೋಲಾಹಲಕ್ಕೆ ಕಾರಣವಾಯಿತು.
ಸಂಸದ್ ಚಲೋ ಪ್ರತಿಭಟನೆಯ ಭಾಗವಾಗಿ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಸೋನಂ ವಾಂಗ್ಚುಕ್ ಅವರ ಉಪವಾಸ ಸತ್ಯಾಗ್ರಹ ಮತ್ತು ನೀಟ್ ಪರೀಕ್ಷಾ ಪೇಪರ್ ಸೋರಿಕೆ ಹಗರಣದಂತಹ ವಿಷಯಗಳ ಕುರಿತು ಪ್ರತಿಭಟನಾಕಾರರು ಧ್ವನಿ ಎತ್ತುತ್ತಿದ್ದರು. ಘರ್ಷಣೆ ವಿಕೋಪಕ್ಕೆ ತಿರುಗುತ್ತಿದ್ದಂತೆ, ಭದ್ರತಾ ಪಡೆ ಕೂಡಾ ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಯಿತು. ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವುದನ್ನು ತಡೆಯಲು ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ಸ್ಥಳಕ್ಕೆ ನಿಯೋಜಿಸಲಾಯಿತು. ಈ ಘಟನೆ ಜಂತರ್ ಮಂತರ್ನಲ್ಲಿ ಉದ್ವಿಗ್ನ ವಾತಾವರಣವನ್ನು ಸೃಷ್ಟಿಸಿತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jul 22, 2026 07:39 AM
ಗೆಳೆಯ ವಾಸುಕಿ ವೈಭವ್ ಕಾನ್ಸರ್ಟ್ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು

