Beegaroota: ಅಭಿಷೇಕ್-ಅವಿವಾ ಮದುವೆ ಬೀಗರ ಔತಣದಲ್ಲಿ ರೆಬೆಲ್ ಸ್ಟಾರ್ ಅಂಬರೀಷ್ ನೆಚ್ಚಿನ ಖಾದ್ಯಗಳು!

ಅರುಣ್​ ಕುಮಾರ್​ ಬೆಳ್ಳಿ

Updated on: Jun 16, 2023 | 10:22 AM

ಸುಮಲತಾ ತಮ್ಮ ಪತಿಯ ನೆಚ್ಚಿನ ಅಡುಗೆಗಳ ತಯಾರಿ ಗೆಜ್ಜಲಗೆರೆಯ 15 ಎಕರೆ ಪ್ರದೇಶದಲ್ಲಿ ಮಾಡಿಸುತ್ತಿದ್ದಾರೆ.

ಮಂಡ್ಯ: ಇವತ್ತು ನಗರದಲ್ಲಿರುವ ಸಂಸದೆ ಸುಮಲತಾ ಅಂಬರೀಷ್ (Sumalatha Ambareesh) ಮನೆಯಲ್ಲಿ ಅವರ ಮಗ ಅಭಿಷೇಕ್ (Abhishek) ಮದುವೆಯ ಬೀಗರ ಔತಣಕೂಟ. ರೆಬೆಲ್ ಸ್ಟಾರ್ ಅಂಬರೀಷ್ (Rebel Star Ambareesh) ಕುಟುಂಬದ ಎಲ್ಲ ಸದಸ್ಯರು ಭರ್ಜರಿ ಬಾಡೂಟ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ತೊಡಗಿದ್ದಾರೆ. ಅಂಬರೀಷ್ ಭೋಜನಪ್ರಿಯರಾಗಿದ್ದರು ಮತ್ತು ಅವರಿಗೆ ನಾನ್ ವೆಜ್ ಊಟ ಬಹಳ ಇಷ್ಟವಾಗುತ್ತಿತ್ತು. ಮಂಡ್ಯದ ಗೌಡರೇ ಹಾಗೆ ಮಾರಾಯ್ರೇ ಬಾಡೂಟ ತಿನ್ನುವುದರಲ್ಲಿ ಮತ್ತು ತಿನ್ನಿಸುವುದರಲ್ಲಿ ಎತ್ತಿದ ಕೈ. ಸುಮಲತಾ ತಮ್ಮ ಪತಿಯ ನೆಚ್ಚಿನ ಡಿಶ್ ಗಳಾದ ಮುದ್ದೆ, ನಾಟಿ ಕೋಳಿ ಸಾಂಬಾರ್, ಚಿಕನ್ ಕಬಾ​ಬ್, ಮಟನ್ ಬಿರಿಯಾನಿ ಮೊದಲಾದ ಅಡುಗೆಗಳ ತಯಾರಿ ಗೆಜ್ಜಲಗೆರೆಯ 15 ಎಕರೆ ಪ್ರದೇಶದಲ್ಲಿ ಮಾಡಿಸುತ್ತಿದ್ದಾರೆ. ಸುಮಾರು 50,000 ಜನ ಔತಣಕೂಟದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಕುಟುಂಬದ ಸದಸ್ಯರೊಬ್ಬರು ಮೆನು ಮತ್ತು ತಯಾರಿ ಬಗ್ಗೆ ಟಿವಿ9 ಕನ್ನಡ ವಾಹಿನಿಯ ಮಂಡ್ಯ ವರದಿಗಾರನಿಗೆ ವಿವರಣೆ ನೀಡುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.