ಸಿಂಗಲ್ ಆಗಿರೋನೇ ಸಿಂಹ: ಅಸಲಿ ಆಟ ತೋರಿಸಲು ರೆಡಿಯಾದ ಲಾಯರ್ ಜಗದೀಶ್

Updated on: Oct 01, 2024 | 8:24 PM

ತಮ್ಮದೇ ತಂಡದವರ ವಿರೋಧ ಇದ್ದರೂ ಕೂಡ ಮಾನವೀಯತೆಯ ದೃಷ್ಟಿಯಿಂದ ಬೇರೆಯವರಿಗೆ ಲಾಯರ್​ ಜಗದೀಶ್​ ಸಹಾಯ ಮಾಡಿದ್ದಾರೆ. ಆದ್ದರಿಂದ ಅವರ ತಂಡದವರು ಗರಂ ಆಗಿದ್ದಾರೆ. ಆದರೂ ಕೂಡ ಲಾಯರ್​ ಜಗದೀಶ್​ ಬದಲಾಗಿಲ್ಲ. ‘ಲೀಡರ್​ ಆದವನು ಗುಂಪಲ್ಲಿ ಇರಲ್ಲ. ಸಿಂಗಲ್​ ಆಗಿರೋನೇ ಸಿಂಹ’ ಎಂದು ಘರ್ಜಿಸೋಕೆ ಅವರು ರೆಡಿಯಾಗಿದ್ದಾರೆ.

ಲಾಯರ್​ ಜಗದೀಶ್​ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಕಾರ್ಯಕ್ರಮಕ್ಕೆ ಕಾಲಿಟ್ಟಿದ್ದು ಅವರ ಅಭಿಮಾನಿಗಳಿಗೆ ಖುಷಿ ಆಗಿದೆ. ಮೊದಲ ಸಂಚಿಕೆಯಿಂದಲೇ ಜಗದೀಶ್​ ಗಮನ ಸೆಳೆಯುತ್ತಿದ್ದಾರೆ. ಲಾಯರ್​ ಜಗದೀಶ್​ ಅವರು ಗುಂಪಿನಲ್ಲಿ ಕಾಣೆಯಾಗುತ್ತಿಲ್ಲ. ಸಿಂಗಲ್ ಆಗಿಯೇ ತಮ್ಮ ಅಭಿಪ್ರಾಯವನ್ನು ಹೇಳುವ ಮೂಲಕ ಅನೇಕರನ್ನು ಅವರು ಎದುರು ಹಾಕಿಕೊಂಡಿದ್ದಾರೆ. ಆ ಬಗ್ಗೆ ಅವರು ನರಕವಾಸಿಗಳ ಜೊತೆ ಮಾತನಾಡಿದ್ದಾರೆ. ಜಗದೀಶ್​ ಅವರ ತಂತ್ರಗಾರಿಕೆ ಬೇರೆ ರೀತಿಯೇ ಇದೆ. ಸ್ವರ್ಗದಲ್ಲಿ ಇರುವ ಅವರು ನರಕದ ಮಂದಿ ಜೊತೆ ಕ್ಲೋಸ್​ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More