ಸಿಲಿಂಡರ್ ಸಮಸ್ಯೆ: ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಗರಂ!
ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಅವರು ಸಿಲಿಂಡರ್ ಮತ್ತು ಎಲ್ಪಿಜಿ ಕೊರತೆಯ ಕುರಿತು ಹಿರಿಯ ಸಚಿವ ಕೆ.ಎಚ್. ಮುನಿಯಪ್ಪ ಅವರ ಹೇಳಿಕೆಗಳನ್ನು ಟೀಕಿಸಿದ್ದಾರೆ. ಕೇಂದ್ರ ಸರ್ಕಾರವನ್ನು ಓಲೈಸುವ ಬದಲು, ಬಿಕ್ಕಟ್ಟಿಗೆ ಕೇಂದ್ರವೇ ನೇರ ಹೊಣೆ ಎಂದು ಸ್ಪಷ್ಟಪಡಿಸುವಂತೆ ಮುನಿಯಪ್ಪ ಅವರಿಗೆ ಲಕ್ಷ್ಮಣ್ ಮನವಿ ಮಾಡಿದ್ದಾರೆ. ಇದು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ ಎಂದು ಅವರು ಒತ್ತಿಹೇಳಿದ್ದಾರೆ.
ದಾವಣಗೆರೆ, ಏಪ್ರಿಲ್ 03: ರಾಜ್ಯದಲ್ಲಿ ಸಿಲಿಂಡರ್, ಆಟೋ ಗ್ಯಾಸ್ಗೆ ತೀವ್ರ ತೊಂದರೆ ವಿಚಾರವಾಗಿ ಸಚಿವ K.H. ಮುನಿಯಪ್ಪ ವಿರುದ್ಧ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ. ಅದು ಕೇಂದ್ರದ ಸಮಸ್ಯೆ, ಅಗತ್ಯಕ್ಕೆ ತಕ್ಕಂತೆ ಪೂರೈಸುತ್ತಿಲ್ಲ. ಹೀಗಿರುವಾಗ ಕೇಂದ್ರದವರು ಪೂರೈಸುತ್ತಿಲ್ಲ ಎಂದು ಹೇಳುವುದನ್ನು ಬಿಟ್ಟು, ಸಚಿವರು ಕೇಂದ್ರ ಸರ್ಕಾರದ ಓಲೈಕೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಲಕ್ಷ್ಮಣ್ ಆರೋಪಿಸಿದ್ದಾರೆ. ಆಟೋ ಚಾಲಕರು ಬಂಕ್ಗಳಲ್ಲಿಯೇ ಮಲಗುತ್ತಿದ್ದು, ಅವರೆಲ್ಲ ರಾಜ್ಯ ಸರ್ಕಾರವೇ ಸಿಲಿಂಡರ್ ಪೂರೈಸ್ತಿದೆ ಎಂದು ತಿಳಿದಿದ್ದಾರೆ. ಹೀಗಾಗಿ ಹಿರಿಯ ಸಚಿವ, ಏಳು ಸಲ ಸಂಸದರಾಗಿದ್ದ ಮುನಿಯಪ್ಪ ಅವರು ಬಾಯಿ ಮುಚ್ಚಿಕೊಂಡು ಇದ್ದರೆ ಚಂದ. ನಾನು ದಯಮಾಡಿ ಕೈಮುಗಿದು ಬೇಡಿಕೊಳ್ಳುವೆ, ಪದೇಪದೆ ಸಭೆ ಮಾಡುವುದು ನಿಲ್ಲಿಸಿ ಎಂದು ಲಕ್ಷ್ಮಣ್ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
