Karnataka Assembly Polls: ಬಿಜೆಪಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಸವದಿ ‘ಲಕ್ಷ್ಮಣ’ ರೇಖೆ ದಾಟಿ ಕಾಂಗ್ರೆಸ್ ಅಂಗಳಕ್ಕೆ ಬಂದಿದ್ದಾರೆ!

Updated on: Apr 14, 2023 | 3:13 PM

ತಮ್ಮ ಮಗನಿಗೂ ಟಿಕೆಟ್ ಕೇಳಿದ್ದೀರಾ ಅಂತ ಪತ್ರಕರ್ತರು ಕೇಳಿದಾಗ, ಬೇರೆ ನಾಯಕರಂತೆ ತನಗೆ ಪುತ್ರ ವ್ಯಾಮೋಹ ಇಲ್ಲ ಎಂದು ಹೇಳಿದರು.

ಬೆಂಗಳೂರು: ಲಕ್ಷ್ಮಣ ಸವದಿಯವರು (Laxman Savadi) ಇಂದು ಸಾಯಂಕಾಲ ಕಾಂಗ್ರೆಸ್ ಪಕ್ಷ ಸೇರುವುದಾಗಿ ಹೇಳಿದ್ದಾರೆ. ಬೆಂಗಳೂರಲ್ಲಿ ಇಂದು ಸಿದ್ದರಾಮಯ್ಯರನ್ನು (Siddaramaiah) ಭೇಟಿಯಾದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸವದಿ ಕಾಂಗ್ರೆಸ್ ಪಕ್ಷದ ನಾಯಕರ ಮುಂದೆ ಎರಡು ಷರತ್ತುಗಳನ್ನು ಇಟ್ಟಿರುವುದಾಗಿ ಹೇಳಿದರು. ಮೊದಲನೇಯದ್ದು ಅವರಿಗೆ ಅಥಣಿ ಕ್ಷೇತ್ರದ (Athani constituency) ಟಿಕೆಟ್ ನೀಡಬೇಕು ಮತ್ತು ಸರ್ಕಾರ ರಚನೆಯಾದ ಮೇಲೆ ಅಥಣಿ ಕ್ಷೇತ್ರದಲ್ಲಿ ಅರ್ಧಕ್ಕೆ ನಿಂತಿರುವ ನಿರಾವರಿ ಯೋಜನೆಗಳನ್ನು ಪೂರ್ತಿಗೊಳಿಸಬೇಕು. ತಮ್ಮ ಮಗನಿಗೂ ಟಿಕೆಟ್ ಕೇಳಿದ್ದೀರಾ ಅಂತ ಪತ್ರಕರ್ತರು ಕೇಳಿದಾಗ, ಬೇರೆ ನಾಯಕರಂತೆ ತನಗೆ ಪುತ್ರ ವ್ಯಾಮೋಹ ಇಲ್ಲ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More