ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷ ತೊರೆಯುವ ವದಂತಿ ಸುಳ್ಳು, ಅವರೆಲ್ಲೂ ಹೋಗಲ್ಲ: ಎಂಬಿ ಪಾಟೀಲ್, ಸಚಿವ

Updated on: Jan 31, 2024 | 1:24 PM

ಸವದಿ ಒಬ್ಬ ಹಿರಿಯ ನಾಯಕರು ಮತ್ತು ಹಿಂದೆ ಉಪ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ 75,000ಕ್ಕೂ ಅಧಿಕ ಬಹುಮತದಿಂದ ಗೆದ್ದು ತಮ್ಮ ಸಾಮರ್ಥ್ಯ ಏನು ಅನ್ನೋದನ್ನು ತೋರಿದವರು, ಅವರು ಕಾಂಗ್ರೆಸ್ ತೊರೆಯುವ ಪ್ರಶ್ನೆ ಯಾವತ್ತೂ ಉಧ್ಭವಿಸಲ್ಲ ಎಂದು ಪಾಟೀಲ್ ಹೇಳಿದರು.

ಬೆಂಗಳೂರು: ಅಥಣಿ ಶಾಸಕ ಲಕ್ಷ್ಮಣ ಸವದಿ (Laxman Savadi) ಕಾಂಗ್ರೆಸ್ ತೊರೆದು ಪುನಃ ಬಿಜೆಪಿಗೆ ವಾಪಸ್ಸು ಹೋಗುವ ಊಹಾಪೋಹಗಳನ್ನು ಕೈಗಾರಿಕೆಗಳ ಸಚಿವ ಎಂಬಿ ಪಾಟೀಲ್ (MB Patil) ತಳ್ಳಿ ಹಾಕಿದರು, ನಗರದಲ್ಲಿಂದು ಮಾಧ್ಯಮ ಗೊಷ್ಟಿಯೊಂದನ್ನು ನಡೆಸಿ ಮಾತಾಡಿದ ಸಚಿವ, ಸವದಿ ಪಕ್ಷ ಬಿಡುತ್ತಾರೆಂದು ಸುಖಾಸುಮ್ಮನೆ ವದಂತಿಗಳನ್ನು ಹಬ್ಬಿಸಲಾಗುತ್ತಿದೆ, ಬೆಳಗಾವಿ ಡಿಸಿಸಿ ಬ್ಯಾಂಕ್ (DCC bank) ಸಂಬಂಧಿಸಿದಂತೆ ಹೇಳುವುದಾದರೆ, ಲಕ್ಷ್ಮಣ ಸವದಿ ಸೇರಿದಂತೆ, ರಮೇಶ್ ಜಾರಕಿಹೊಳಿ, ಪ್ರಕಾಶ್ ಹುಕ್ಕೇರಿ, ರಮೇಶ್ ಕತ್ತಿ-ಎಲ್ಲರೂ ಅದರ ಸದಸ್ಯರು. ಅವರೆಲ್ಲ ಒಟ್ಟಾಗಿ ಒಂದೆಡೆ ಕೂತು ಮಾತಾಡಿದರೆ, ಅದಕ್ಕೆ ವಿಪರೀತ ಅರ್ಥ ಕಲ್ಪಿಸಿ ಸವದಿ ಬಿಜೆಪಿ ಸೇರುತ್ತಿದ್ದಾರೆ ಅಂತಲ್ಲ ಎಂದು ಪಾಟೀಲ್ ಹೇಳಿದರು. ಸವದಿ ಒಬ್ಬ ಹಿರಿಯ ನಾಯಕರು ಮತ್ತು ಹಿಂದೆ ಉಪ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ 75,000ಕ್ಕೂ ಅಧಿಕ ಬಹುಮತದಿಂದ ಗೆದ್ದು ತಮ್ಮ ಸಾಮರ್ಥ್ಯ ಏನು ಅನ್ನೋದನ್ನು ತೋರಿದವರು, ಅವರು ಕಾಂಗ್ರೆಸ್ ತೊರೆಯುವ ಪ್ರಶ್ನೆ ಯಾವತ್ತೂ ಉಧ್ಭವಿಸಲ್ಲ ಎಂದು ಪಾಟೀಲ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More