AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls; ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರುವ ವದಂತಿ ಸುಳ್ಳು, ಅಂಥದ್ದೇನೂ ಸಂಭವಿಸದು: ಸಿಎನ್ ಅಶ್ಥಥ್ ನಾರಾಯಣ, ಸಚಿವರು

Karnataka Assembly Polls; ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರುವ ವದಂತಿ ಸುಳ್ಳು, ಅಂಥದ್ದೇನೂ ಸಂಭವಿಸದು: ಸಿಎನ್ ಅಶ್ಥಥ್ ನಾರಾಯಣ, ಸಚಿವರು

ಅರುಣ್​ ಕುಮಾರ್​ ಬೆಳ್ಳಿ
|

Updated on: Apr 11, 2023 | 1:47 PM

Share

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಿಂದೆಂದಿಗಿಂತಲೂ ಹೆಚ್ಚಿನ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ಅಶ್ವಥ್ ನಾರಾಯಣ ಹೇಳಿದರು.

ಶಿವಮೊಗ್ಗ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಚಿವ ಸಿಎನ್ ಅಶ್ವಥ್ ನಾರಾಯಣ (CN Ashwath Narayan) ರಾಜ್ಯದ ಜನತೆಗೆ ಒಂದು ಉತ್ತಮ ಆಡಳಿತ ಸಿಗಬೇಕಾದರೆ ಸುಭದ್ರ ಸರ್ಕಾರ ಬೇಕಾಗುತ್ತದೆ ಅದನ್ನು ಬಿಜೆಪಿ ಮಾತ್ರ ನೀಡುವುದು ಸಾಧ್ಯ ಎಂದು ಹೇಳಿದರು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ (assembly polls) ಬಿಜೆಪಿ ಹಿಂದೆಂದಿಗಿಂತಲೂ ಹೆಚ್ಚಿನ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು. ಪಕ್ಷದ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ (Laxman Savadi) ಕಾಂಗ್ರೆಸ್ ಪಕ್ಷ ಸೇರುವ ವದಂತಿಗಳ ಕಡೆ ಮಾಧ್ಯಮದವರು ಗಮನಸೆಳೆದಾಗ ಸಚಿವರು ಚುಟುಕಾಗಿ ಅಂಥದ್ದೇನೂ ಸಂಭವಿಸುವುದಿಲ್ಲ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More