AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikmagalur: ವಿರೋಧ ಪಕ್ಷದ ನಾಯಕ ಯಾರು ಅನ್ನೋದು ನಾಳೆ ಗೊತ್ತಾಗಲಿದೆ: ಬಸವರಾಜ ಬೊಮ್ಮಾಯಿ, ಶಾಸಕ

Chikmagalur: ವಿರೋಧ ಪಕ್ಷದ ನಾಯಕ ಯಾರು ಅನ್ನೋದು ನಾಳೆ ಗೊತ್ತಾಗಲಿದೆ: ಬಸವರಾಜ ಬೊಮ್ಮಾಯಿ, ಶಾಸಕ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Jul 01, 2023 | 4:57 PM

Share

ಬಜೆಟ್ ಆಧಿವೇಶನದಲ್ಲಿ ಸಾಕಷ್ಟು ವಿಷಯಗಳನ್ನು ಚರ್ಚಿಸಬೇಕಿದೆ ಎಂದು ಬೊಮ್ಮಾಯಿ ಹೇಳಿದರು.

ಚಿಕ್ಕಮಗಳೂರು: ಬಿಜೆಪಿ ಶಾಸಕ ಆರ್ ಅಶೋಕ (R Ashoka) ಹುಟ್ಟುಹಬ್ಬ ಆಚರಿಸಲು ನಗರಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ನಾಳೆ ಸಾಯಂಕಾಲದೊಳಗೆ ವಿರೋಧ ಪಕ್ಷದ ನಾಯಕ ಯಾರು ಅನ್ನೋದು ಗೊತ್ತಾಗುತ್ತದೆ ಎಂದರು. ಬಜೆಟ್ ಆಧಿವೇಶನದಲ್ಲಿ (Budget session) ಸಾಕಷ್ಟು ವಿಷಯಗಳನ್ನು ಚರ್ಚಿಸಬೇಕಿದೆ ಎಂದ ಬೊಮ್ಮಾಯಿ, ಗ್ಯಾರಂಟಿಗಳನ್ನು ಘೋಷಿಸಿದ ಕಾಂಗ್ರೆಸ್ ಅವುಗಳನ್ನು ಗೊಂದಲದ ಗೂಡಾಗಿ ಪರಿವರ್ತಿಸಿದೆ ಎಂದು ಟೀಕಿಸಿದರು. ಬಿಜೆಪಿಯಲ್ಲಿ ಹೆಚ್ಚುತ್ತಿರುವ ಭಿನ್ನಮತ ಮತ್ತು ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಪ್ರತಿದಿನ ಮಾಧ್ಯಮದವರೊಂದಿಗೆ ಮಾತಾಡಿ ಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡುತ್ತಿರುವುದು ಮತ್ತು ಶಿಸ್ತು ಸಮಿತಿ ನೀಡಿರುವ ನೊಟೀಸ್ ಗೆ ಉತ್ತರ ನೀಡದಿರುವ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಬೊಮ್ಮಾಯಿ, ಅದನ್ನೆಲ್ಲ ಪಕ್ಷದ ರಾಜ್ಯಾಧ್ಯಕ್ಷರು ನೋಡಿಕೊಳ್ಳುತ್ತಾರೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.