ಬೆಳಗಾವಿ ಅಧಿವೇಶನ: ಕೋಟ್ ಧರಿಸಿ ತಡವಾಗಿ ಅಧಿವೇಶನಕ್ಕೆ ಬಂದ ಚಲುವರಾಯಸ್ವಾಮಿ ಕಾಲೆಳೆದ ವಿಪಕ್ಷ ನಾಯಕ ಅಶೋಕ

Updated on: Dec 14, 2023 | 2:23 PM

Karnataka Assembly Winter Session: ಸಚಿವ ಚಲುವರಾಯಸ್ವಾಮಿ ಇಂದು ತಡವಾಗಿ ಅಧಿವೇಶನಕ್ಕೆ ಆಗಮಿಸಿದ್ದರು. ಅದೇ ಕಾರಣಕ್ಕೆ ಅಶೋಕ, ಚರ್ಚೆ ಏನು ನಡೆದಿದೆ ಅಂತ ಸಚಿವರಿಗೆ ಗೊತ್ತಿರಲಿಕ್ಕಿಲ್ಲ, ಎಲ್ಲ ಶಾಸಕರಿಗೆ ಮಧ್ಯಾಹ್ನದ ಊಟ ಕೊಡೋದಿಕ್ಕೆ ಮೋದಿ ಕೋಟು ಧರಿಸಲು ಹೋಗಿದ್ದೀರಂತ ಅಂತ ಕಾಣುತ್ತೆ ಎಂದು ಛೇಡಿಸುತ್ತಾರೆ.

ಬೆಳಗಾವಿ: ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನ ಸಭಾ ಅಧಿವೇಶನದಲ್ಲಿ (Assembly Session) ಇಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ (R Ashoka) ಮತ್ತು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ (N Cheluvarayaswamy) ನಡುವೆ ವಿನೋದಭರಿತ ಮಾತಿನ ಚಕಮಕಿ ನಡೆಯಿತು. ಮಾತಿಗೆ ಕಾರಣವಾಗಿದ್ದು ಸಚಿವ ಧರಿಸಿದ್ದ ವೇಸ್ಟ್ ಕೋಟ್! ಆಲೆಮನೆಗಳ ಬಗ್ಗೆ ವಿಷಯ ಪ್ರಸ್ತಾಪಿಸಿದ ಅಶೋಕ್ ಹಿಂದೆ ಆರೋಗ್ಯ ಸಚಿವ ಚಲುವರಾಯಸ್ವಾಮಿಯವರ ಕಾಲೆಳೆಯುತ್ತಾರೆ. ಅಸಲಿಗೆ, ಸಚಿವ ಇಂದು ತಡವಾಗಿ ಅಧಿವೇಶನಕ್ಕೆ ಆಗಮಿಸಿದ್ದರು. ಅದೇ ಕಾರಣಕ್ಕೆ ಅಶೋಕ, ತಡವಾಗಿ ಆಗಮಿಸಿದ ಸಚಿವರಿಗೆ ಚರ್ಚೆ ಏನು ನಡೆದಿದೆ ಅಂತ ಗೊತ್ತಿರಲಿಕ್ಕಿಲ್ಲ, ಎಲ್ಲ ಶಾಸಕರಿಗೆ ಮಧ್ಯಾಹ್ನದ ಊಟ ಕೊಡೋದಿಕ್ಕೆ ಮೋದಿ ಕೋಟು ಧರಿಸಲು ಹೋಗಿದ್ದರು ಅಂತ ಕಾಣುತ್ತೆ ಅಂತ ಹೇಳಿದಾಗ ಚಲುವರಾಯಸ್ವಾಮಿ, ಮೋದಿಗಿಂತ ಮೊದಲು ಸಹ ಈ ಕೋಟಿತ್ತು ಅನ್ನುತ್ತಾರೆ. ಕಾಂಗ್ರೆಸ್ ಶಾಸಕರೊಬ್ಬರು ನೆಹರೂ ಕೋಟು ಅನ್ನುತ್ತಾರೆ. ಆಗ ಸಭಾಧ್ಯಕ್ಷ ಯುಟಿ ಖಾದರ್, ಅದು ಚಲುವರಾಯಸ್ವಾಮಿ ಕೋಟು ಅನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More