ಪ್ರಜ್ವಲ್ ರೇವಣ್ಣ ಬಿಡುಗಡೆ ಮಾಡಿರುವ ವಿಡಿಯೋ ಬಗ್ಗೆ ಆರ್ ಅಶೋಕ ಪ್ರತಿಕ್ರಿಯೆ !

ಅರುಣ್​ ಕುಮಾರ್​ ಬೆಳ್ಳಿ

Updated on: May 27, 2024 | 7:21 PM

ಪ್ರಜ್ವಲ್ ತಪ್ಪಿಸಿಕೊಂಡಿದ್ದು ಸರಿಯಲ್ಲ ಎಂದು ಹೇಳುವ ಅಶೋಕ ನಂತರ ರಾಜ್ಯ ಸರ್ಕಾರವನ್ನು ದೂಷಿಸಲಾರಂಭಿಸುತ್ತಾರೆ. ಇದು ಕಾಂಗ್ರೆಸ್ ಸರ್ಕಾರದ ಷಡ್ಯಂತ್ರವೆಂದು ಇಡೀ ಪ್ರಪಂಚಕ್ಕೆ ಗೊತ್ತಾಗಿದೆ, ತಮ್ಮವರನ್ನು ಬಚಾವ್ ಮಾಡುವುದಕ್ಕೋಸ್ಕರ ಕಾಂಗ್ರೆಸ್ ಸರ್ಕಾರ ಎಸ್ಐಟಿಯನ್ನು ರಚಿಸಿದೆ ಎಂದು ಅಶೋಕ ಹೇಳಿದರು.

ಚಿಕ್ಕಬಳ್ಳಾಪುರ: ಲೈಂಗಿಕ ಹಗರಣಗಳ ಪ್ರಕರಣದಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡು ಯಾವುದೋ ದೇಶದಲ್ಲಿ ಕೂತು ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಇವತ್ತು ಬಿಡುಗಡೆ ಮಾಡಿರುವ ವಿಡಿಯೋದ ಬಗ್ಗೆ ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳು ಪ್ರಶ್ನೆ ಕೇಳಿದಾಗ ವಿರೋಧ ಪಕ್ಷದ ನಾಯಕ ಆರ್ ಅಶೋಕ (R Ashoka) ಪ್ರತಿಕ್ರಿಯೆ ನೀಡಿದರು. ಅವರಸದಲ್ಲಿದ್ದ ಅವರು ಆಮೇಲೆ ಹೇಳ್ತೀನಿ ಅಂತ ಹೇಳಿದರೂ ಪತ್ರಕರ್ತರು ಬಿಡಲಿಲ್ಲ. ಅವರೊಂದಿಗೆ ಬಿಜೆಪಿ ಶಾಸಕ ಡಾ ಸಿಎನ್ ಅಶ್ವಥ್ ನಾರಾಯಣ (Dr CN Ashwath Narayan) ಸಹ ಇದ್ದರು. ತಡವಾದರೂ ಕೊನೆಗೆ ಪ್ರಜ್ವಲ್ ತಪ್ಪು ಒಪ್ಪಿಕೊಂಡಿದ್ದಾರೆ, ಯಾರೂ ಕಾನೂನಿಗಿಂತ ದೊಡ್ಡವರಲ್ಲ, ಕಾನೂನು ಮುಂದೆ ತಲೆಬಾಗಲೇ ಬೇಕು, ಪ್ರಜ್ವಲ್ ತಪ್ಪಿಸಿಕೊಂಡಿದ್ದು ಸರಿಯಲ್ಲ ಎಂದು ಹೇಳುವ ಅಶೋಕ ನಂತರ ರಾಜ್ಯ ಸರ್ಕಾರವನ್ನು ದೂಷಿಸಲಾರಂಭಿಸುತ್ತಾರೆ. ಇದು ಕಾಂಗ್ರೆಸ್ ಸರ್ಕಾರದ ಷಡ್ಯಂತ್ರವೆಂದು ಇಡೀ ಪ್ರಪಂಚಕ್ಕೆ ಗೊತ್ತಾಗಿದೆ, ತಮ್ಮವರನ್ನು ಬಚಾವ್ ಮಾಡುವುದಕ್ಕೋಸ್ಕರ ಕಾಂಗ್ರೆಸ್ ಸರ್ಕಾರ ಎಸ್ಐಟಿಯನ್ನು ರಚಿಸಿದೆ ಎಂದು ಅಶೋಕ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ನೀರಿನ ಸಮಸ್ಯೆಯಿಂದ ಕಂಪನಿಗಳು ರಾಜ್ಯಕ್ಕೆ ಬರಲು ಹಿಂದೇಟು: ಆರ್ ಅಶೋಕ ಹೇಳಿಕೆಗೆ ಕೃಷ್ಣ ಬೈರೇಗೌಡ ತಿರುಗೇಟು

Published on: May 27, 2024 05:53 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.