ಪಶುಸಂಗೋಪನೆ ಇಲಾಖೆಯ ಜಮೀನು ಅಲ್ಪಸಂಖ್ಯಾತರ ಇಲಾಖೆಗೆ; ಸರ್ಕಾರದ ವಿರುದ್ಧ ಕಿಡಿಕಾರಿದ ಆರ್ ಅಶೋಕ

ಅರುಣ್​ ಕುಮಾರ್​ ಬೆಳ್ಳಿ

Updated on: Feb 29, 2024 | 10:46 AM

ಈ ನಾಚಿಕೆಗೆಟ್ಟ ಸರ್ಕಾರ ಮತ್ತೊಂದು ಹೆಜ್ಜೆ ಮುಂದೆ ಹೋಗಿ, ಬೆಂಗಳೂರಿನ ಟೌನ್ ಹಾಲ್ ಮತ್ತು ಮೈಸೂರು ರಸ್ತೆ ನಡುವೆ ಪ್ರೈಮ್ ಲೊಕೇಶನಲ್ಲಿರುವ ಮತ್ತು ಪಶು ಸಂಗೋಪನಾ ಇಲಾಖೆಯ ಸುಪರ್ದಿಯಲ್ಲಿದ್ದ ಜಾಗವನ್ನು ಅಲ್ಪಸಂಖ್ಯಾತ ಇಲಾಖೆಗೆ ವರ್ಗಾಯಿಸುವಂತೆ ಆದೇಶ ಹೊರಡಿಸಿದೆ ಎಂದು ಹೇಳಿದ ಅಶೋಕ ಆದೇಶದ ಪ್ರತಿಯನ್ನು ತೋರಿಸಿದರು.

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ (R Ashoka), ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಕೇವಲ ಅಲ್ಪಸಂಖ್ಯಾತರನ್ನು (minorities) ಓಲೈಸುವ ನಿಟ್ಟಿನಲ್ಲಿ ಅಧಿಕಾರ ನಡೆಸುತ್ತಿದೆ ಎಂದು ಹೇಳಿದರು. ಶಾಲೆಗಳ ಹೆಬ್ಬಾಗಿಲಲ್ಲಿ ಬರೆದಿರುವ ಕೈ ಮುಗಿದು ಒಳಗೆ ಬಾ ಅಂತ ಬರೆದ ಉಕ್ತಿಯನ್ನು ತೆಗೆಸಿಹಾಕುತ್ತದೆ ಮತ್ತು ಕುವೆಂಪು (Kuvempu) ವಿರಚಿತ ನಾಡಗೀತೆ ಜಯ ಭಾರತ ಜನನಿಯ ತನುಜಾತೆ ಶಾಲೆಗಳಲ್ಲಿ ಹಾಡೋದು ಬೇಡ ಅಂತ ಆದೇಶ ಹೊರಡಿಸುತ್ತದೆ ಎಂದು ಆಶೋಕ ಹೇಳಿದರು. ಈಗ ಈ ನಾಚಿಕೆಗೆಟ್ಟ ಸರ್ಕಾರ ಮತ್ತೊಂದು ಹೆಜ್ಜೆ ಮುಂದೆ ಹೋಗಿ, ಬೆಂಗಳೂರಿನ ಟೌನ್ ಹಾಲ್ ಮತ್ತು ಮೈಸೂರು ರಸ್ತೆ ನಡುವೆ ಪ್ರೈಮ್ ಲೊಕೇಶನಲ್ಲಿರುವ ಮತ್ತು ಪಶು ಸಂಗೋಪನಾ ಇಲಾಖೆಯ ಸುಪರ್ದಿಯಲ್ಲಿದ್ದ ಜಾಗವನ್ನು ಅಲ್ಪಸಂಖ್ಯಾತ ಇಲಾಖೆಗೆ ವರ್ಗಾಯಿಸುವಂತೆ ಆದೇಶ ಹೊರಡಿಸಿದೆ ಎಂದು ಹೇಳಿ ಆದೇಶದ ಪ್ರತಿಯನ್ನು ತೋರಿಸಿದರು.

ಈ ಜಮೀನಿನ ಮಾರುಕಟ್ಟೆ ಮೌಲ್ಯ ರೂ. 500 ಕೋಟಿ ಎಂದ ಅಶೋಕ ಆ ಭಾಗದಲ್ಲಿ ಅಲ್ಪಸಂಖ್ಯಾತರು ಜಾಸ್ತಿ ಇರೋದ್ರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂಬ ಸಮಜಾಯಿಷಿಯನ್ನು ಸರ್ಕಾರ ನೀಡಿದೆ, ಆ ಸ್ಥಳದಲ್ಲಿ ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನವೊಂದಿದೆ ಸರ್ಕಾರ ಅದನ್ನೂ ಅಲ್ಪಸಂಖ್ಯಾತರಿಗೆ ನೀಡಲಿ ಎಂದು ಕಿಡಿಕಾರಿದರು.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಪಾಕ್ ಪರ ಘೋಷಣೆ: ರಾಷ್ಟ್ರಧ್ವಜ ಹಿಡಿದು ವಿಧಾನಸಭೆಗೆ ಬಂದ ಬಿಜೆಪಿ ನಾಯಕರು, ಸ್ಪೀಕರ್ ಖಾದರ್ ಆಕ್ಷೇಪ, ಅಶೋಕ್ ರೋಷಾವೇಶ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.