ಮುಡಾ ಪ್ರಕರಣದಲ್ಲಿ ಎಲ್ಲ ಪಕ್ಷ ಮತ್ತು ಜಾತಿ-ಧರ್ಮಗಳ ಜನ ಶಾಮೀಲಾಗಿದ್ದಾರೆ: ಸ್ನೇಹಮಯಿ ಕೃಷ್ಣ

ಅರುಣ್​ ಕುಮಾರ್​ ಬೆಳ್ಳಿ

Updated on: Dec 19, 2024 | 2:06 PM

ಯಾರೇ ಅಡ್ಡಬಂದರೂ ತನ್ನ ಹೋರಾಟ ಮಾತ್ರ ನಿಲ್ಲದು, ಜೀವ ಇರೋವರೆಗೆ ಹೋರಾಡುತ್ತೇನೆ ಮತ್ತು ಜೀವ ಹೋದರೂ ಹೋರಾಟ ಮುಂದುವರಿಯುವ ವ್ಯವಸ್ಥೆಯನ್ನು ತಾನು ಮಾಡಿರುವುದಾಗಿ ಸ್ನೇಹಮಯಿ ಕೃಷ್ಣ ಹೇಳುತ್ತಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಬೆಳವಣಿಗೆಗಳು ಜರುಗುತ್ತಿವೆ, ಅದರೆ ಪ್ರಕರಣವನ್ನು ತಾರ್ಕಿಕ ಅಂತ್ಯ ಮುಟ್ಟಿಸುವವರೆಗೆ ವಿಶ್ರಮಿಸುವುದಿಲ್ಲ ಎಂದು ಕೃಷ್ಣ ಹೇಳುತ್ತಾರೆ.

ಮೈಸೂರು: ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಟೆದೆಯ ವ್ಯಕ್ತಿ ಅನ್ನೋದ್ರಲ್ಲಿ ಅನುಮಾನ ಬೇಡ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರೊಬ್ಬರು ತನಗೆ ಅಮಿಶವೊಡ್ಡಿರುವ ಬಗ್ಗೆ ನಗರದಲ್ಲಿ ನಮ್ಮ ಪ್ರತಿನಿಧಿಯೊಂದಿಗೆ ಮಾತಾಡಿರುವ ಅವರು, ಭಷ್ಟಾಚಾರದ ಮಹಾಕೂಪದಲ್ಲಿ ಎಲ್ಲ ಪಕ್ಷಗಳ, ಜಾತಿ-ಧರ್ಮಗಳ ಜನ ಶಾಮೀಲಾಗಿದ್ದಾರೆ, ಈ ಪ್ರಕರಣ ಕೇವಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಮತ್ತು ಕುಟುಂಬಕ್ಕೆ ಸೀಮಿತವಾಗಿಲ್ಲ, ಎಲ್ಲರ ಉದ್ದೇಶ ಒಂದೇ-ತಾನು ಪ್ರಕರಣವನ್ನು ಹಿಂಪಡೆಯಬೇಕು ಮತ್ತು ಪ್ರಕರಣ ತನಿಖೆ ಸಿಬಿಐ ವಹಿಸಿಕೊಳ್ಳಬಾರದು ಅನ್ನೋದಾಗಿದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮುಡಾ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ!

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.