ಲೀಲಾವತಿ ಅಂತಿಮ ದರ್ಶನ ಪಡೆದು ವಿನೋದ್​ ರಾಜ್​ನ ಸಂತೈಸಿದ ಉಪೇಂದ್ರ

|

Updated on: Dec 09, 2023 | 10:38 AM

ನಿರ್ದೇಶಕ ಉಪೇಂದ್ರ ಅವರು ಇಂದು (ಡಿಸೆಂಬರ್ 9) ಬೆಳಿಗ್ಗೆ ಲೀಲಾವತಿ ಅಂತಿಮ ದರ್ಶನ ಪಡೆದರು. ಈ ವೇಳೆ ಅವರು ಲೀಲಾವತಿ ಪುತ್ರ ವಿನೋದ್ ರಾಜ್​ ಅವರನ್ನು ತಬ್ಬಿ ಸಂತೈಸಿದರು.

ಹಿರಿಯ ನಟಿ ಲೀಲಾವತಿ ಅವರು ನಮ್ಮನ್ನು ಅಗಲಿದ್ದಾರೆ. ಸದ್ಯ ಸೋಲದೇವನಹಳ್ಳಿಯಲ್ಲಿರುವ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕನ್ನಡ ಚಿತ್ರರಂಗದ ಅನೇಕರು ಆಗಮಿಸಿ ಲೀಲಾವತಿ ಅವರ ಅಂತಿಮ ದರ್ಶನ ಪಡೆದಿದ್ದಾರೆ. ನಟ, ನಿರ್ದೇಶಕ ಉಪೇಂದ್ರ ಅವರು ಇಂದು (ಡಿಸೆಂಬರ್ 9) ಬೆಳಿಗ್ಗೆ ಲೀಲಾವತಿ ಅಂತಿಮ ದರ್ಶನ ಪಡೆದರು. ಈ ವೇಳೆ ಅವರು ಲೀಲಾವತಿ (leelavathi) ಪುತ್ರ ವಿನೋದ್ ರಾಜ್​ ಅವರನ್ನು ತಬ್ಬಿ ಸಂತೈಸಿದರು. ಈ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯ ಆಗಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:35 am, Sat, 9 December 23

Follow us on