ರಸ್ತೆಯಲ್ಲೇ ಕುಳಿತು ಕೆಆರ್ ನಗರದ ಜನರ ನಿದ್ರೆಗೆಡಿಸಿದ್ದ ಭಯಾನಕ ಚಿರತೆ ಕೊನೆಗೂ ಸೆರೆ; ಇಲ್ಲಿದೆ ವಿಡಿಯೋ
ಗುರುವಾರ ರಾತ್ರಿಯೇ ಕೆ.ಆರ್ ನಗರ ಪಟ್ಟಣಕ್ಕೆ ಬಂದಿದ್ದ ಚಿರತೆ ರಸ್ತೆಯಲ್ಲಿ ಓಡಾಡಿತ್ತು. ರಸ್ತೆ ಮಧ್ಯೆ ಕುಳಿತಿರುವ ಚಿರತೆಯನ್ನು ಕಂಡು ಭಯಭೀತರಾದ ಜನರು ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು.
ಮೈಸೂರು: ಮೈಸೂರು ಜಿಲ್ಲೆಯ ಕೆ.ಆರ್ ನಗರದಲ್ಲಿ ಜನರ ನಿದ್ದೆಗೆಡಿಸಿದ್ದ ಚಿರತೆಯನ್ನು ಕೊನೆಗೂ ಸೆರೆಹಿಡಿಯಲಾಗಿದೆ. ಇಂದು ಬೆಳಗ್ಗೆ ಕೆ.ಆರ್ ನಗರದಿಂದ (KR Nagar) ಮುಳ್ಳೂರಿಗೆ ಹೋಗುವ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ಚಿರತೆ, ರಸ್ತೆಯಲ್ಲಿ ಸಿಕ್ಕ ಸಿಕ್ಕವರ ಮೇಲೆ ದಾಳಿ ನಡೆಸಿ ಜನರಲ್ಲಿ ಆತಂಕ ಮೂಡಿಸಿತ್ತು. ಚಿರತೆ (Leopard) ದಾಳಿಯಿಂದ ಬೆಚ್ಚಿ ಬಿದ್ದಿರುವ ಕೆ ಆರ್ ನಗರ ಪಟ್ಟಣ ನಿವಾಸಿಗಳು ಮನೆಯಿಂದ ಆಚೆ ಬರಲು ಹೆದರುವ ಪರಿಸ್ಥಿತಿ ಉಂಟಾಗಿತ್ತು. ಗುರುವಾರ ರಾತ್ರಿಯೇ ಕೆ.ಆರ್ ನಗರ ಪಟ್ಟಣಕ್ಕೆ ಬಂದಿದ್ದ ಚಿರತೆ ರಸ್ತೆಯಲ್ಲಿ ಓಡಾಡಿತ್ತು. ರಸ್ತೆ ಮಧ್ಯೆ ಕುಳಿತಿರುವ ಚಿರತೆಯನ್ನು ಕಂಡು ಭಯಭೀತರಾದ ಜನರು ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು. 2 ಗಂಟೆಯ ಕಾರ್ಯಾಚರಣೆ ಬಳಿಕ ಆ ಚಿರತೆಗೆ ಅರವಳಿಕೆ ಮದ್ದು ನೀಡಿ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಸೆರೆ ಹಿಡಿದಿದ್ದಾರೆ.
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?

