ಊರಿಗೆ ಚಿರತೆ ಭಯ ಕಾಡುತ್ತಿದ್ರೆ, ಮಹಿಳೆಯನ್ನ ಬಲಿ ಪಡೆದ ಕೂಗಳತೆಯಲ್ಲೇ ಮಲಗಿದ ವ್ಯಕ್ತಿ

Edited By:

Updated on: Nov 20, 2024 | 5:45 PM

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿಯ ಕಂಬಾಳು ಗೊಲ್ಲರಹಟ್ಟಿ ಗ್ರಾಮದ ಬಳಿ ಚಿರತೆಯಿಂದು ಓರ್ವ ಮಹಿಳೆಯನ್ನು ಬಲಿ ಪಡೆದುಕೊಂಡಿದೆ. ಇದರಿಂದ ಜನ ಭಯದಿಂದ ಓಡಾಡುತ್ತಿದ್ದಾರೆ. ಆದ್ರೆ, ವ್ಯಕ್ತಿಯೋರ್ವ, ಚಿರತೆ ಮಹಿಳೆಯನ್ನು ಬಲಿ ಪಡೆದ ಕೂಗಳತೆ ದೂರದಲ್ಲೇ ಆಯಾಗಿ ನಿದ್ರೆಗೆ ಜಾರಿದ್ದಾನೆ.

ಬೆಂಗಳೂರು, (ನವೆಂಬರ್ 20): ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿಯ ಕಂಬಾಳು ಗೊಲ್ಲರಹಟ್ಟಿ ಗ್ರಾಮದ ಬಳಿ ಚಿರತೆಯಿಂದು ಓರ್ವ ಮಹಿಳೆಯನ್ನು ಬಲಿ ಪಡೆದುಕೊಂಡಿದೆ. ಹೀಗಾಗಿ ಗೊಲ್ಲರಹಟ್ಟಿ ಗ್ರಾಮದ ಸುತ್ತಮುತ್ತಲಿನ ಜನರು ಚಿರತೆ ಭಯದಲ್ಲೇ ಓಡಾಡುತ್ತಿದ್ದಾರೆ. ಇನ್ನೊಂದೆಡೆ ಮಹಿಳೆಯ ಮೇಲೆ ದಾಳಿ ನಡೆಸಿದ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಬಾರಿ ಸರ್ಕಸ್ ಮಾಡುತ್ತಿದ್ರೆ, ಇಲ್ಲೊಬ್ಬ ಲೋಕದ ಪಾರವೇ ಇಲ್ಲದೆ ಗಾಢ ನಿದ್ರೆಗೆ ಜಾರಿದ್ದಾನೆ. ಹೌದು…ಊರಿನ ಜನ ಚಿರತೆ ಭೀತಿಯಿಂದ ಮನೆಯಿಂದ ಆಚೆ ಬರಲು ಹೆದರಿಕೊಳ್ಳುತ್ತಿದ್ದಾರೆ. ಹೀರುವಾಗ ವ್ಯಕ್ತಿಯೋರ್ವ ಯಾವುದೇ ಭಯವಿಲ್ಲದೇ ಮದ್ಯದ ನಶೆಯಲ್ಲಿ ಮಲಗಿದ್ದಾನೆ. ಅದು ಚಿರತೆ ಮಹಿಳೆಯನ್ನು ಬಲಿ ಪಡೆದ ಕೂಗಳತೆ ದೂರದಲ್ಲೇ ಆಯಾಗಿ ನಿದ್ರೆಗೆ ಜಾರಿದ್ದಾನೆ.

Follow Us
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More