ಮನೆಯೊಳಗೆ ಅವಿತು ಕುಳಿತಿದ್ದ ಚಿರತೆಯನ್ನು ಸೆರೆ ಹಿಡಿದಿದ್ದು ಹೇಗೆ ಗೊತ್ತಾ? ವಿಡಿಯೋ ಇದೆ
ಸ್ಥಳಕ್ಕೆ ಬಂದ ಅಧಿಕಾರಿಗಳು ಬೋನು ಇರಿಸಿ ಚಿರತೆಯನ್ನು ಹಿಡಿದಿದ್ದಾರೆ. ಸೆರೆ ಸಿಕ್ಕ ಹೆಣ್ಣು ಚಿರತೆಗೆ ಒಂದು ವರ್ಷವಾಗಿದೆ. ಚಿರತೆಯ ಆರೋಗ್ಯ ತಪಾಸಣೆ ಮಾಡಿ, ಪಶು ವೈದ್ಯಾಧಿಕಾರಿ ಆರೋಗ್ಯ ದೃಢಿಕರಿಸಿದ್ದಾರೆ.
ಚಿರತೆಯೊಂದು ಮನೆಯೊಳಗೆ ಅವಿತು ಕುಳಿತು ಭಯ ಸೃಷ್ಟಿಸಿತ್ತು. ಉಡುಪಿ ಜಿಲ್ಲೆಯ ಬ್ರಹ್ಮಾವರ ಚಾಂತಾರು ಅಗ್ರಹಾರದ ಕೃಷ್ಣಮೂರ್ತಿ ಕೆದಿಲಾಯ ಎಂಬುವವರ ಮನೆಯಲ್ಲಿ ಚಿರತೆ ಅವಿತು ಕುಳಿತಿತ್ತು. ಮನೆಯವರು ಬಲೆ ಹಾಕಿ ಚಿರತೆಯನ್ನು ಬಂಧಿಸಿದ್ದರು. ನಂತರ ಬ್ರಹ್ಮಾವರ ಪೊಲೀಸ್ ಮತ್ತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಅಧಿಕಾರಿಗಳು ಬೋನು ಇರಿಸಿ ಚಿರತೆಯನ್ನು ಹಿಡಿದಿದ್ದಾರೆ. ಸೆರೆ ಸಿಕ್ಕ ಹೆಣ್ಣು ಚಿರತೆಗೆ ಒಂದು ವರ್ಷವಾಗಿದೆ. ಚಿರತೆಯ ಆರೋಗ್ಯ ತಪಾಸಣೆ ಮಾಡಿ, ಪಶು ವೈದ್ಯಾಧಿಕಾರಿ ಆರೋಗ್ಯ ದೃಢಿಕರಿಸಿದ್ದಾರೆ. ನಂತರ ಸಿದ್ಧಾಪುರ ಬಳಿಯ ಹೊಸಂಗಡಿ ಕಾಡಿನಲ್ಲಿ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸ್ವತಂತ್ರಗೊಳಿಸಿದರು.
Latest Videos
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್

