Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಹಾರ ಅರಸಿ ಬಂದ ಚಿರತೆ, ಕೋಳಿ ಫಾರಂನಲ್ಲಿ ಲಾಕ್: ಅರವಳಿಕೆ ಮದ್ದು ನೀಡಿ ಸೆರೆ ಹಿಡಿದ ಅರಣ್ಯ ಅಧಿಕಾರಿಗಳು

ಆಹಾರ ಅರಸಿ ಬಂದ ಚಿರತೆ, ಕೋಳಿ ಫಾರಂನಲ್ಲಿ ಲಾಕ್: ಅರವಳಿಕೆ ಮದ್ದು ನೀಡಿ ಸೆರೆ ಹಿಡಿದ ಅರಣ್ಯ ಅಧಿಕಾರಿಗಳು

ಮಹೇಶ್ ಇ, ಭೂಮನಹಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on:Sep 01, 2023 | 3:03 PM

ಆಹಾರ ಅರಸಿ ಬಂದ ನಾಲ್ಕು ವರ್ಷದ ಚಿರತೆಯೊಂದು ಕೋಳಿ ಫಾರಂನಲ್ಲಿ ಸೆರೆ​​ ಆಗಿದ್ದು, ಅರವಳಿಕೆ ಮದ್ದು ನೀಡಿ ಅರಣ್ಯ ಅಧಿಕಾರಿಗಳು ಚಿರತೆ ಸೆರೆ ಹಿಡಿದಿರುವಂತಹ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಚೌಡನಕುಪ್ಪೆಯಲ್ಲಿ ಘಟನೆ ನಡೆದಿದೆ. ಮರಿಗೌಡಯ್ಯ ಎಂಬುವರಿಗೆ ಕೋಳಿ ಫಾರಂ ಸೇರಿದೆ.

ತುಮಕೂರು, ಸೆಪ್ಟೆಂಬರ್​ 1: ಆಹಾರ ಅರಸಿ ಬಂದ ನಾಲ್ಕು ವರ್ಷದ ಚಿರತೆಯೊಂದು (Leopard) ಕೋಳಿ ಫಾರಂನಲ್ಲಿ ಲಾಕ್​​ ಆಗಿದ್ದು, ಅರವಳಿಕೆ ಮದ್ದು ನೀಡಿ ಅರಣ್ಯ ಅಧಿಕಾರಿಗಳು ಚಿರತೆ ಸೆರೆ ಹಿಡಿದಿದ್ದಾರೆ. ಜಿಲ್ಲೆಯ ಕುಣಿಗಲ್ ತಾಲ್ಲೂಕಿನ  ಚೌಡನಕುಪ್ಪೆಯಲ್ಲಿ ಘಟನೆ ನಡೆದಿದೆ. ಮರಿಗೌಡಯ್ಯ ಎಂಬುವರಿಗೆ ಕೋಳಿ ಫಾರಂ ಸೇರಿದೆ. ಇಂದು ಬೆಳಗ್ಗೆ ಆಹಾರ ಅರಸಿ ಬಂದಿದ್ದು, ಮತ್ತೆ ವಾಪಸ್ ಹೋಗಲು ದಾರಿ ತಿಳಿಯದೇ ಸೆರೆ ಆಗಿದೆ. ಚಿರತೆ ಕಂಡು ಗಾಬರಿಯಾದ ಕೋಳಿ ಫಾರಂ‌ ಸಿಬ್ಬಂದಿಗಳು, ಕೂಡಲೇ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬನ್ನೇರುಘಟ್ಟ ಜೈವಿಕ ಉದ್ಯಾನವನದ ಅರವಳಿಕೆ ತಜ್ಞರು ಹಾಗೂ ಸಹಾಯಕ ನಿರ್ದೇಶಕರಾದ ಡಾ. ಕೆ.ಎಸ್ ಉಮಾಶಂಕರ್​ರಿಂದ ಚಿರತೆಗೆ ಅರವಳಿಕೆ ಮದ್ದು ನೀಡಿ ಅರಣ್ಯ ಅಧಿಕಾರಿಗಳು ರಕ್ಷಣೆ ಮಾಡಿದ್ದು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಚಿರತೆಯನ್ನು ತೆಗೆದುಕೊಂಡು ಹೋಗಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Sep 01, 2023 03:03 PM