ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ
ಶಿವರಾತ್ರಿ ಜಾತ್ರೆ ವೇಳೆ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನೋರ್ವನನ್ನು ನರಭಕ್ಷಕ ಚಿರತೆ ಕೊಂದು ತಿಂದಿತ್ತು. ಆ ಘಟನೆ ಮಾಸುವ ಮುನ್ನವೇ ಮತ್ತೆ ಅದೇ ಜಾಗದಲ್ಲಿ ಚಿರತೆ ಕಾಣಿಸಿಕೊಂಡಿದೆ. ರಸ್ತೆಯ ಇಳಿಜಾರಿನ ತಿರುವಿನಲ್ಲಿ ತಡೆಗೋಡೆ ಪಕ್ಕದಲ್ಲಿ ಚಿರತೆ ಕುಳಿತಿರುವ ದೃಶ್ಯ ವಾಹನ ಸವಾರರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ಚಾಮರಾಜನಗರ, ಮಾರ್ಚ್ 11: ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಭಕ್ತರಲ್ಲಿ ಆತಂಕ ಹೆಚ್ಚಿಸಿದೆ. ಬೆಟ್ಟದ ಆನೆ ತಲೆದಿಂಬದ ಬಳಿ ಚಿರತೆ ಓಡಾಟ ಕಂಡುಬಂದಿದ್ದು, ರಸ್ತೆಯ ಇಳಿಜಾರಿನ ತಿರುವಿನಲ್ಲಿ ತಡೆಗೋಡೆ ಪಕ್ಕದಲ್ಲಿ ಚಿರತೆ ಕುಳಿತಿರುವ ದೃಶ್ಯ ವಾಹನದಲ್ಲಿ ತೆರಳುತ್ತಿದ್ದವರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಶಿವರಾತ್ರಿ ಜಾತ್ರೆ ವೇಳೆ ಪಾದಯಾತ್ರಿಕನನ್ನು ಚಿರತೆ ಕೊಂದು ತಿಂದಿತ್ತು. ಈಗ ಮತ್ತೆ ಅದೇ ಸ್ಥಳದಲ್ಲಿ ಚಿರತೆ ಕಾಣಿಸಿಕೊಂಡಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Mar 11, 2026 10:32 AM
Follow Us