ಶಿರಸಿ ಬಳಿ ಚಿರತೆ ಪ್ರತ್ಯಕ್ಷ, ಮನೆಯಲ್ಲಿದ್ದ ನಾಯಿಯನ್ನ ಹೊತ್ತೊಯ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Edited By:

Updated on: Jul 01, 2025 | 9:13 PM

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲೂ ಸಹ ಚಿರತೆ ಕಾಟ ಶುರುವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸಾಲ್ಕಣಿ ಸಮೀಪದ ದುಗ್ಗುಮನೆ ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಪ್ರತ್ಯಕ್ಷವಾಗಿದ್ದು, ಗಣಪತಿ ಹೆಗಡೆ ಎನ್ನುವರ ಮನೆಯೊಳಗೆ ನುಗ್ಗಿ ನಾಯಿಯನ್ನು ಹೊತ್ತೊಯ್ದಿದೆ. ಸಿಸಿಟಿವಿಯಲ್ಲಿ ಸೆರೆಯಾದ ಚಿರತೆ ದೃಶ್ಯವನ್ನು ನೋಡಿ ಮನೆಯವರು ಬೆಚ್ಚಿಬಿದ್ದಿದ್ದಾರೆ

ಕಾರವಾರ, (ಜುಲೈ 01): ಇತ್ತೀಚಗೆ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಜನರು ತತ್ತರಿಸಿದ್ದಾರೆ. ಅದರಲ್ಲೂ ಹುಲಿ, ಚಿರತೆ, ಆನೆಗಳ ಕಾಟಕ್ಕೆ ಕಾಡಂಚಿನ ಗ್ರಾಮಸ್ಥರು ರೋಸಿಹೋಗಿದ್ದಾರೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲೂ ಸಹ ಚಿರತೆ ಕಾಟ ಶುರುವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸಾಲ್ಕಣಿ ಸಮೀಪದ ದುಗ್ಗುಮನೆ ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಪ್ರತ್ಯಕ್ಷವಾಗಿದ್ದು, ಗಣಪತಿ ಹೆಗಡೆ ಎನ್ನುವರ ಮನೆಯೊಳಗೆ ನುಗ್ಗಿ ನಾಯಿಯನ್ನು ಹೊತ್ತೊಯ್ದಿದೆ. ಸಿಸಿಟಿವಿಯಲ್ಲಿ ಸೆರೆಯಾದ ಚಿರತೆ ದೃಶ್ಯವನ್ನು ನೋಡಿ ಮನೆಯವರು ಬೆಚ್ಚಿಬಿದ್ದಿದ್ದಾರೆ

Published on: Jul 01, 2025 09:10 PM
Follow Us
Web contact

TV9 Kannada

Read More