AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಟ್ಟಿಗೆಗೆ ನುಗ್ಗಿದ ಚಿರತೆಗಳು:30ಕ್ಕೂ ಹೆಚ್ಚು ಕುರಿಗಳ ಮಾರಣಹೋಮ

ಕೊಟ್ಟಿಗೆಗೆ ನುಗ್ಗಿದ ಚಿರತೆಗಳು:30ಕ್ಕೂ ಹೆಚ್ಚು ಕುರಿಗಳ ಮಾರಣಹೋಮ

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ರಮೇಶ್ ಬಿ. ಜವಳಗೇರಾ|

Updated on: Aug 06, 2025 | 4:18 PM

Share

ಕೊಟ್ಟಿಗೆ ಚಿರತೆಗಳು ನುಗ್ಗಿದ್ದು, ಸಿಕ್ಕ ಸಿಕ್ಕ ಕುರಿಗಳ ಮೇಲೆ ದಾಳಿ ಮಾಡಿವೆ. ಪರಿಣಾಮ 30ಕ್ಕೂ ಹೆಚ್ಚು ಕುರಿಗಳ ಮಾರಣಹೋಮವಾಗಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಸಿರಿಗೆರೆ ಕ್ರಾಸ್ ಬಳಿ ಈ ಘಟನೆ ನಡೆದಿದೆ.  ದಿಳ್ಳೆಪ್ಪ ಎಂಬ ರೈತನ ಅಡಿಕೆ ತೋಟದಲ್ಲಿ ಕುರಿಗಳ ಹಟ್ಟಿ ಹಾಕಿಕೊಂಡಿದ್ದರು. ಆದ್ರೆ, ತಡರಾತ್ರಿ ಭರ್ಜರಿ ಮಳೆ ಬಂದ ಹಿನ್ನೆಲೆ ಕುರಿಗಳನ್ನ ಅಲ್ಲಿಯೇ ಬಿಟ್ಟು ಬೆಳಗಾವಿ ಮೂಲದ ಕುರಿಗಾಯಿಗಳು ಎತ್ತರದ ಸ್ಥಳಕ್ಕೆ ಹೋಗಿದ್ದರು. ಈ ವೇಳೆ ಎರಡ್ಮೂರು ಚಿರತೆಗಳು ಕೊಟ್ಟಿಗೆ ನುಗ್ಗಿದ್ದು, ಸಿಕ್ಕ ಸಿಕ್ಕ ಕುರಿಗಳ ಮೇಲೆ ದಾಳಿ ಮಾಡಿವೆ.

ದಾವಣಗೆರೆ, (ಆಗಸ್ಟ್ 06): ಕೊಟ್ಟಿಗೆ ಚಿರತೆಗಳು ನುಗ್ಗಿದ್ದು, ಸಿಕ್ಕ ಸಿಕ್ಕ ಕುರಿಗಳ ಮೇಲೆ ದಾಳಿ ಮಾಡಿವೆ. ಪರಿಣಾಮ 30ಕ್ಕೂ ಹೆಚ್ಚು ಕುರಿಗಳ ಮಾರಣಹೋಮವಾಗಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಸಿರಿಗೆರೆ ಕ್ರಾಸ್ ಬಳಿ ಘಟನೆ ನಡೆದಿದೆ.  ದಿಳ್ಳೆಪ್ಪ ಎಂಬ ರೈತನ ಅಡಿಕೆ ತೋಟದಲ್ಲಿ ಕುರಿಗಳ ಹಟ್ಟಿ ಹಾಕಿಕೊಂಡಿದ್ದರು. ಆದ್ರೆ, ತಡರಾತ್ರಿ ಭರ್ಜರಿ ಮಳೆ ಬಂದ ಹಿನ್ನೆಲೆ ಕುರಿಗಳನ್ನ ಅಲ್ಲಿಯೇ ಬಿಟ್ಟು ಬೆಳಗಾವಿ ಮೂಲದ ಕುರಿಗಾಯಿಗಳು ಎತ್ತರದ ಸ್ಥಳಕ್ಕೆ ಹೋಗಿದ್ದರು. ಈ ವೇಳೆ ಎರಡ್ಮೂರು ಚಿರತೆಗಳು ಕೊಟ್ಟಿಗೆ ನುಗ್ಗಿದ್ದು, ಸಿಕ್ಕ ಸಿಕ್ಕ ಕುರಿಗಳ ಮೇಲೆ ದಾಳಿ ಮಾಡಿವೆ. ಕುರಿಗಳನ್ನು ಅರ್ಧಂಬರ್ಧ ಕಚ್ಚಿ ತಿಂದು ಪರಾರಿಯಾಗಿವೆ. ಇದರಿಂದ 30ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ್ದು, ಕುರಿಗಾಯಿಗಳು ಕಂಲಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ನಿವಾಸಿ ಸೋಮಣ್ಣ ಎಂಬುಬರಿಗೆ ಸೇರಿದ ಕುರಿಗಳು ಎಂದು ತಿಳಿದುಬಂದಿದೆ.

ಇನ್ನು ವಿಷಯ ತಿಳಿದು ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸುತ್ತಲಿನ ಪ್ರದೇಶದಲ್ಲಿ ಎರಡರಿಂದ ಮೂರು ಚಿರತೆಗಳ ಸುತ್ತಾಟದ ಮಾಹಿತಿ ಇದೆ ಎಂದಿದ್ದಾರೆ.