DK Shivakumar; ಜೆಡಿಎಸ್ ಮತ್ತು ಬಿಜೆಪಿ ನಾಯಕರು ಈಗಲೇ ಪ್ರತಿಭಟನೆ ಶುರುಮಾಡಲಿ: ಡಿಕೆ ಶಿವಕುಮಾರ್, ಉಪ ಮುಖ್ಯಮಂತ್ರಿ

ಅರುಣ್​ ಕುಮಾರ್​ ಬೆಳ್ಳಿ

Updated on: May 26, 2023 | 10:30 AM

ಸಂಪುಟವನ್ನು ಯಾರ್ಯಾರೆಲ್ಲ ಸೇರಲಿದ್ದಾರೆ ಅಂತ ಕೇಳಿದ ಪ್ರಶ್ನೆಗೆ ಶಿವಕುಮಾರ್ ಹಾರಿಕೆ ಉತ್ತರ ನೀಡಿದರು.

ಬೆಂಗಳೂರು: ಸಂಪುಟ ವಿಸ್ತರಣೆ ಕಸರತ್ತು ಇನ್ನೂ ಕೊನೆಗೊಂಡಿಲ್ಲ ಆದರೆ ಅಲ್ಪಾವಧಿಗಾಗಿ ದೆಹಲಿಯಿಂದ ಬೆಂಗಳೂರಿಗೆ ಕಳೆದ ರಾತ್ರಿ ವಾಪಸ್ಸಾದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಗೆಲುವಾಗಿದ್ದರು ಮತ್ತು ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಮಾಧ್ಯಮ ಪ್ರತಿನಿಧಿಗಳೊಂದಿಗೆ ನಗುನಗುತ್ತಾ ಹಾಸ್ಯಭರಿತ ಭಾಷೆಯಲ್ಲಿ ಮಾತಾಡಿದರು. ಸಂಪುಟವನ್ನು ಯಾರ್ಯಾರೆಲ್ಲ ಸೇರಲಿದ್ದಾರೆ ಅಂತ ಕೇಳಿದ ಪ್ರಶ್ನೆಗೆ ಅವರು ಹಾರಿಕೆ ಉತ್ತರ ನೀಡಿದರು. ಜೂನ್ ತಿಂಗಳಲ್ಲಿ ಕಾಂಗ್ರೆಸ್ ಪಕ್ಷ (Congress party) ನೀಡಿರುವ ಗ್ಯಾರಂಟಿಗಳನ್ನು (guarantees) ಈಡೇರಿಸದಿದ್ದರೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಪ್ರತಿಭಟನೆ ಆರಂಭಿಸುತ್ತಾರಂತೆ ಎಂದು ಪತ್ರಕರ್ತರು ಹೇಳಿದಾಗ ಜೂನ್ ಯಾಕೆ ನಾಳೆಯಿಂದಲೇ ಶುರುಮಾಡಲಿ ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.