Budget Session; ಬಿಜೆಪಿ ಶಾಸಕರು ಮತ್ತು ಸಂಸದರು ಪೆಟ್ರೋಲ್ ಬೆಲೆ ಇಳಿಸಿ ಅಂತ ಪ್ರಧಾನಿ ನರೇಂದ್ರ ಮೋದಿ ಎದುರು ಪ್ರತಿಭಟನೆ ಮಾಡಲಿ: ಡಿಕೆ ಶಿವಕುಮಾರ್

ಯಡಿಯೂರಪ್ಪ ಇಲ್ಲಿ ಪ್ರತಿಭಟನೆ ನಡೆಸಿದರೆ ಪ್ರಯೋಜನವಿಲ್ಲ ದೆಹಲಿಯಲ್ಲಿ ನಡೆಸಲಿ ಅಂತ ಶಿವಕುಮಾರ್ ಹೇಳಿದರು.

Budget Session; ಬಿಜೆಪಿ ಶಾಸಕರು ಮತ್ತು ಸಂಸದರು ಪೆಟ್ರೋಲ್ ಬೆಲೆ ಇಳಿಸಿ ಅಂತ ಪ್ರಧಾನಿ ನರೇಂದ್ರ ಮೋದಿ ಎದುರು ಪ್ರತಿಭಟನೆ ಮಾಡಲಿ: ಡಿಕೆ ಶಿವಕುಮಾರ್
|

Updated on: Jul 05, 2023 | 5:02 PM

ಬೆಂಗಳೂರು: ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಮೂರನೇ ದಿನವೂ ಗಲಾಟೆ ಗದ್ದಲ. ಗ್ಯಾರಂಟಿಗಳ ಬಗ್ಗೆಯೇ ವಿರೋಧ ಪಕ್ಷದ ಸದಸ್ಯರ ವಾಗ್ವಾದಗಳು. ಬಿಜೆಪಿ ಸದಸ್ಯರ ಟೀಕೆಗಳಿಗೆ ಉತ್ತರಿಸಲು ಎದ್ದು ನಿಂತ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar), ಬಿಜೆಪಿ ಸದಸ್ಯರು ಮತ್ತು ನಾಯಕರು ಮಾಡುತ್ತಿರುವ ಪ್ರತಿಭಟನೆ ಪಶ್ಚಾತ್ತಾಪದ ಪ್ರತಿಭಟನೆ (Protest of Repentance), ರಾಜ್ಯದ ಬಡವರಿಗೆ, ಶ್ರಮಿಕರಿಗೆ ತಮ್ಮಿಂದ ಕೊಡಲಾಗದ್ದನ್ನು ಕಾಂಗ್ರೆಸ್ ಸರ್ಕಾರ ಕೊಡುವಂತಾಯ್ತಲ್ಲ ಅಂತ ಪಶ್ಚಾತ್ತಾಪ ಪಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ ಅಂತ ಹೇಳಿದಾಗ ಬಿಜೆಪಿ ಸದಸ್ಯರು, ಮುಖ್ಯಮಂತ್ರಿಯಾಗಲಿಲ್ಲವಲ್ಲಾ ಅಂತ ನೀವು ಪಶ್ಚಾತ್ತಾಪ ಪಡುತ್ತರಿಬಹುದು ಅಂತ ಛೇಡಿಸಿದರು. ಮಾತು ಮುಂದುವರಿಸಿದ ಶಿವಕುಮಾರ್ ಕಚ್ಛಾ ತೈಲದ ಬೆಲೆ ಪಾತಾಳ ಕಂಡಿದ್ದರೂ ಪೆಟ್ರೋಲಿಯಂ ಪದಾರ್ಥಗಳ ಬೆಲೆ ಯಾಕೆ ಇಳಿಯುತ್ತಿಲ್ಲ ಅಂತ ಬಿಜೆಪಿ ಶಾಸಕರು, ಸಂಸದರು ದೆಹಲಿಗೆ ಹೋಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (PM Narendra Modi) ಮುಂದೆ ಪ್ರತಿಭಟಿಸಲಿ, ಯಡಿಯೂರಪ್ಪ (BS Yediyurappa) ಇಲ್ಲಿ ಪ್ರತಿಭಟನೆ ನಡೆಸಿದರೆ ಪ್ರಯೋಜನವಿಲ್ಲ ಅಂತ ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ