AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರೋಧ ಪಕ್ಷದ ನಾಯಕರು ಹಿಟ್ ಅಂಡ್ ರನ್ ಮಾಡೋದು ಬೇಡ, ದಾಖಲೆಗಳನ್ನು ತನಿಖೆಗೆ ಒಪ್ಪಿಸಲಿ: ಪ್ರಿಯಾಂಕ್ ಖರ್ಗೆ, ಸಚಿವ

ವಿರೋಧ ಪಕ್ಷದ ನಾಯಕರು ಹಿಟ್ ಅಂಡ್ ರನ್ ಮಾಡೋದು ಬೇಡ, ದಾಖಲೆಗಳನ್ನು ತನಿಖೆಗೆ ಒಪ್ಪಿಸಲಿ: ಪ್ರಿಯಾಂಕ್ ಖರ್ಗೆ, ಸಚಿವ

ಅರುಣ್​ ಕುಮಾರ್​ ಬೆಳ್ಳಿ
|

Updated on: Feb 10, 2024 | 12:40 PM

Share

ತಮ್ಮ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ನಾಗಮೋಹನ ದಾಸ್ ಸಮಿತಿ ರಚನೆ ಮಾಡಿದೆ, ಮಧ್ಯಂತರ ವರದಿಯನ್ನು ಬಿಡುಗಡೆ ಮಾಡಲಾಗಿದೆ, ಎಫ್ ಐ ಆರ್ ಗಳಾಗಿವೆ ಮತ್ತು ಕೆಲ ಅರೆಸ್ಟ್ ಗಳು ಸಹ ಆಗಿವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಬಳಿ ದಾಖಲೆಗಳಿದ್ದರೆ ಸಮಿತಿಗೆ ನೀಡಲಿ ಎಂದು ಖರ್ಗೆ ಹೇಳಿದರು.

ಕಲಬುರಗಿ: ಇಂದು ಕಲಬುರಗಿಯಲ್ಲಿ ಪುನಃ ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge); ಬಿಜೆಪಿ ಮತ್ತು ಜೆಡಿಎಸ್ ನಾಯಕರು ಹಿಟ್ ಅಂಡ್ ರನ್ (hit and run) ಮಾಡೋದು ಬಿಟ್ಟು ತಮ್ಮ ಸರಕಾರ ಭ್ರಷ್ಟಾಚಾರ ನಡೆಸುತ್ತಿರುವ ಬಗ್ಗೆ ದಾಖಲೆಗಳಿದ್ದರೆ ಅವುಗಳನ್ನು ನಾಗಮೋಹನ್ ದಾಸ್ ಸಮಿತಿಗೆ (HN Nagamohan Das Commission) ನೀಡಲಿ, ತನಿಖೆ ಆಗುತ್ತದೆ ಎಂದು ಹೇಳಿದರು. ಎಲ್ಲ ಅರೋಪಗಳ ತನಿಖೆ ನಡೆಸಲು ತಮ್ಮ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟವಾಗಿ ಹೇಳಿದ್ದಾರೆ ಎಂದ ಖರ್ಗೆ ಹೇಳಿದರು.

ತಮ್ಮ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ನಾಗಮೋಹನ ದಾಸ್ ಸಮಿತಿ ರಚನೆ ಮಾಡಿದೆ, ಮಧ್ಯಂತರ ವರದಿಯನ್ನು ಬಿಡುಗಡೆ ಮಾಡಲಾಗಿದೆ, ಎಫ್ ಐ ಆರ್ ಗಳಾಗಿವೆ ಮತ್ತು ಕೆಲ ಅರೆಸ್ಟ್ ಗಳು ಸಹ ಆಗಿವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಬಳಿ ದಾಖಲೆಗಳಿದ್ದರೆ ಸಮಿತಿಗೆ ನೀಡಲಿ ಎಂದು ಖರ್ಗೆ ಹೇಳಿದರು.

ತಮ್ಮ ಸರ್ಕಾರ ವಿಧಾನ ಸೌಧವನ್ನು ಪ್ರಜಾಸೌಧವಾಗಿ ಉಳಿಸಿಕೊಂಡಿದೆಯೇ ಹೊರತು ವ್ಯಾಪಾರ ಸೌಧವಾಗಿ ಪರಿವರ್ತಿಸಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More