AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MLA speaks; ಬೇಕಿದ್ರೆ ಪ್ರತಾಪ್ ಸಿಂಹ ಇನ್ನೊಂದು ಮದುವೆಯಾಗಿ ಕಷ್ಟ ಏನು ಅಂತ ನಮಗೆ ಹೇಳಲಿ: ತನ್ವೀರ್ ಸೇಠ್, ಶಾಸಕ

MLA speaks; ಬೇಕಿದ್ರೆ ಪ್ರತಾಪ್ ಸಿಂಹ ಇನ್ನೊಂದು ಮದುವೆಯಾಗಿ ಕಷ್ಟ ಏನು ಅಂತ ನಮಗೆ ಹೇಳಲಿ: ತನ್ವೀರ್ ಸೇಠ್, ಶಾಸಕ

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 17, 2023 | 2:52 PM

Share

ಕೆಲ ಸಮುದಾಯಗಳನ್ನು ಗುರಿ ಮಾಡಿ ಹಿಂದಿನ ಸರ್ಕಾರ ಮತಾಂತರ ನಿಷೇದ ಕಾನೂನು ಜಾರಿ ಮಾಡಿದೆ ಎಂದು ಸೇಟ್​ ಹೇಳಿದರು

ಮೈಸೂರು: ವಿದ್ಯುತ್ ದರ ಏರಿಕೆಯಿಂದ ಜನ ತತ್ತರಿಸಿದ್ದಾರೆ ಅದನ್ನು ಕಡಿಮೆ ಮಾಡಲಿ ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ಮೈಸೂರು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ (Tanveer Sait) ಹೇಳಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಶಾಸಕ, ಗೃಹ ಲಕ್ಷ್ಮಿ ಯೋಜನೆ ಜಾರಿ ಮಾಡುವಾಗ ಮುಸ್ಲಿಂ ಸಮುದಾಯದ ಜನ ಎರಡೆರಡು ಮದುವೆಯಾಗಿರುತ್ತಾರೆ, ಅವರಿಗೆ ಯಾವ ಮಾನದಂಡ ಅನ್ವಯಿಸುತ್ತೆ ಅಂತ ಸಂಸದ ಪ್ರತಾಪ್ ಸಿಂಹ (Pratap Simha) ಕೇಳಿರುವುದಕ್ಕೆ ಪ್ರತಿಕ್ರಿಯಿಸುತ್ತಾ, ಪ್ರತಾಪ್ ಬೇಕಿದ್ದರೆ ಇನ್ನೊಂದು ಮದುವೆಯಾಗಲಿ ನಂತರ ಇಬ್ಬರು ಹೆಂಡಿರನ್ನು ಕಟ್ಟಿಕೊಂಡರೆ ಏನೆಲ್ಲ ತಾಪತ್ರಯ ಆಗುತ್ತದೆ ಅನ್ನೋದನ್ನು ಸ್ವಂತ ಅನುಭವದಿಂದ ನಮಗೆ ಹೇಳಲಿ ಎಂದರು. ಮತಾಂತರ ನಿಷೇಧ ಕಾಯ್ದೆ ರದ್ದು ಮಾಡುವ ಪ್ರಸ್ತಾಪದ ಬಗ್ಗೆ ಮಾತಾಡಿದ ತನ್ವೀರ್, ಬಲವಂತದ ಮತಾಂತರ ನಡೆಯಬಾರದು ಅಂತ ಸಂವಿಧಾನದಲ್ಲಿ (The Constitution) ಸ್ಪಷ್ಟವಾಗಿ ಹೇಳಿದೆ, ಕೆಲ ಸಮುದಾಯಗಳನ್ನು ಗುರಿ ಮಾಡಿ ಹಿಂದಿನ ಸರ್ಕಾರ ಕಾನೂನು ಜಾರಿ ಮಾಡಿದೆ, ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ತೀರ್ಮಾನ ತೆಗೆದುಕೊಂಡ ಬಳಿಕ ಪ್ರತಿಕ್ರಿಯೆ ನೀಡುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More