ಮಾಧ್ಯಮದವರಿಗೆ ನೈತಿಕತೆ ಇದ್ದರೆ ರಾಮನಗರದ ಬಗ್ಗೆ ಕುಮಾರಸ್ವಾಮಿ ಆಡಿದ ಮಾತುಗಳನ್ನು ಜನರ ಮುಂದಿಡಲಿ: ಡಿಕೆ ಸುರೇಶ್

ಒಕ್ಕಲಿಗ ಸಮಾಜದವರು ಸಹಕಾರ ಸಚಿವ ಕೆಎನ್ ರಾಜಣ್ಣ ಒಕ್ಕಲಿಗ ಮಹಾ ಸಂಸ್ಥಾನ ಮಠದ ಸ್ವಾಮೀಜಿ ಚಂದ್ರಶೇಖರ ಶ್ರೀಗಳ ಕ್ಷಮೆ ಕೇಳಬೇಕು ಎಂದಿರುವ ಬಗ್ಗೆ ತಮ್ಮ ಪ್ರತಿಕ್ರಿಯೆ ನೀಡಿದ ಡಿಕೆ ಸುರೇಶ್ ಅದು ಸಮಾಜದ ತೀರ್ಮಾನ ಎಂದು ಹೇಳಿದರು. ಏತನ್ಮಧ್ಯೆ, ಡಿಕೆ ಶಿವಕುಮಾರ್ ರಾಜಣ್ಣಗೆ ಬಾಯಿಗೆ ಬೀಗ ಜಡಿದುಕೊಂಡಿರುವಂತೆ ಮತ್ತೊಂದು ಎಚ್ಚರಿಕೆ ನೀಡಿದ್ದಾರೆ.

ಮಾಧ್ಯಮದವರಿಗೆ ನೈತಿಕತೆ ಇದ್ದರೆ ರಾಮನಗರದ ಬಗ್ಗೆ ಕುಮಾರಸ್ವಾಮಿ ಆಡಿದ ಮಾತುಗಳನ್ನು ಜನರ ಮುಂದಿಡಲಿ: ಡಿಕೆ ಸುರೇಶ್
|

Updated on: Jun 29, 2024 | 11:58 AM

ರಾಮನಗರ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಾಜಿ ಸಂಸದ ಡಿಕೆ ಸುರೇಶ್ ತಮ್ಮ ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದರು. ಚನ್ನಪಟ್ಟಣ ವಿಧಾನಸಭಾ ಉಪ ಚುನಾವನೆಯಲ್ಲಿ ನಿಮ್ಮ ಕುಟುಂಬದಿಂದ ಯಾರಾದರೂ ಸ್ಪರ್ಧಿಸುತ್ತಿರಾ ಅಂತ ಕೇಳಿದ ಪ್ರಶ್ನೆಗೆ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಜನ ಮತ್ತು ಮಾಧ್ಯಮದವರು ನನ್ನ ಆಚಾರ ವಿಚಾರಗಳನ್ನು ತಿರಸ್ಕಾರ ಮಾಡಿದ್ದಾರೆ, ಹಾಗಾಗಿ ಇನ್ನು ಮುಂದೆ ನಾನು ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು. ಕುಮಾರಸ್ವಾಮಿಯವರು ತಾನೇ ಚನ್ನಪಟ್ಟಣಕ್ಕೆ ಮೊದಲು ಬಂದಿದ್ದು ಹೇಳಿರುವುದಕ್ಕೆ ಉತ್ತರಿಸಿದ ಸುರೇಶ್, ಯಾರು ಮೊದಲು ಬಂದಿದ್ದರು ಯಾರು ನಂತರ ಬಂದರು ಅನ್ನೋದನ್ನು ಕಟ್ಟಿಕೊಂಡು ಏನೂ ಆಗಬೇಕಿಲ್ಲ, ರಾಮನಗರ ಒಂದು ಕಣ್ಣು ಹೋಯಿತು, ಚನ್ನಪಟ್ಟಣದಲ್ಲಿ ಮತ್ತೊಂದು ಕಣ್ಣೂ ಹೋಯಿತು ಅಂತ ಸೂಚ್ಯವಾಗಿ ಹೇಳಿ ಮಾಧ್ಯಮದವರಿಗೆ ನೈತಿಕತೆ ಇದ್ದರೆ ಕುಮಾರಸ್ವಾಮಿಯವರು ಹಿಂದೆ ನೀಡಿದ ಹೇಳಿಕೆಗಳನ್ನು ಜನರ ಮುಂದೆ ಇಡಲಿ ಅನ್ನುತ್ತಾರೆ. ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಚಿತ್ರನಟ ದರ್ಶನ್ ಅವರನ್ನು ಕಣಕ್ಕಿಳಿಸುವ ಯೋಚನೆ ಇತ್ತೇ ಎಂದು ಕೇಳಿದ ಪ್ರಶ್ನೆಗೆ ಸುರೇಶ್ ಕುಚೇಷ್ಟೆಯ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವ ಅವಶ್ಯಕತೆಯಿಲ್ಲ ಎನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಯೋಗ್ಯತೆ ಇಲ್ಲವೆಂದಾದರೆ ಚುನಾವಣೆಗೆ ಹೋಗುವುದು ವಾಸಿ: ಕೆಎನ್ ರಾಜಣ್ಣ ವಿರುದ್ಧ ಡಿಕೆ ಸುರೇಶ್ ಆಕ್ರೋಶ

Follow us
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
T20 World Cup: ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ
T20 World Cup: ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ
T20 World Cup: ಶಾಂಪೆನ್​ ಬಾಟಲ್​ ಓಪನ್​ ಮಾಡಿ ಸಂಭ್ರಮಿಸಿದ ನಾಯಕ ರೋಹಿತ್
T20 World Cup: ಶಾಂಪೆನ್​ ಬಾಟಲ್​ ಓಪನ್​ ಮಾಡಿ ಸಂಭ್ರಮಿಸಿದ ನಾಯಕ ರೋಹಿತ್
ಗೆಳೆಯರೊಟ್ಟಿಗೆ ಮ್ಯಾಚ್ ವೀಕ್ಷಿಸಿದ ಕಿಚ್ಚ, ಸಂಭ್ರಮಿಸಿದ್ದು ಹೀಗೆ
ಗೆಳೆಯರೊಟ್ಟಿಗೆ ಮ್ಯಾಚ್ ವೀಕ್ಷಿಸಿದ ಕಿಚ್ಚ, ಸಂಭ್ರಮಿಸಿದ್ದು ಹೀಗೆ
T20 World Cup: ವಿಶ್ವಕಪ್​ ಹಿಡಿದು ಸಂಭ್ರಮಿಸಿದ ರಾಹುಲ್​ ದ್ರಾವಿಡ್
T20 World Cup: ವಿಶ್ವಕಪ್​ ಹಿಡಿದು ಸಂಭ್ರಮಿಸಿದ ರಾಹುಲ್​ ದ್ರಾವಿಡ್
ಲೇಟೆಸ್ಟ್ ಫೀಚರ್ಸ್​ ಜತೆಗೆ ಮಾರುಕಟ್ಟೆಗೆ ಬಂತು ನೋಕಿಯಾ ಮೊಬೈಲ್
ಲೇಟೆಸ್ಟ್ ಫೀಚರ್ಸ್​ ಜತೆಗೆ ಮಾರುಕಟ್ಟೆಗೆ ಬಂತು ನೋಕಿಯಾ ಮೊಬೈಲ್