ಕೊಲೆಗಡುಕರಿಗೆ ಶಿಕ್ಷೆ ಆಗಲಿ; ಎಂಎಲ್ಎ ಮುಂದೆ ಮೃತ ರೇಣುಕಾ ಸ್ವಾಮಿ ತಾಯಿ ಗೋಳಾಟ
ನಟ ದರ್ಶನ್ ಮತ್ತು ಆತನ ಗ್ಯಾಂಗ್ನಿಂದ ಚಿತ್ರದುರ್ಗದ ರೇಣುಕಾ ಸ್ವಾಮಿ(Renuka Swamy) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇಂದು(ಜೂ.15) ಚಿತ್ರದುರ್ಗದ ವಿಆರ್ ಎಸ್ ಬಡಾವಣೆಯಲ್ಲಿರುವ ಮೃತ ರೇಣುಕಾಸ್ವಾಮಿ ನಿವಾಸಕ್ಕೆ ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ(Veerendra Puppy) ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು.
ಚಿತ್ರದುರ್ಗ, ಜೂ.15: ನಟ ದರ್ಶನ್ ಮತ್ತು ಆತನ ಗ್ಯಾಂಗ್ನಿಂದ ಚಿತ್ರದುರ್ಗದ ರೇಣುಕಾ ಸ್ವಾಮಿ(Renuka Swamy) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇದರ ಮಧ್ಯೆ ಮನೆಗೆ ಆಧಾರವಾಗಿದ್ದ ಮಗನನ್ನು ಕಳೆದುಕೊಂಡ ತಂದೆ-ತಾಯಿ ಮತ್ತು ಗರ್ಭಿಣಿಯಾಗಿರುವ ಮೃತನ ಪತ್ನಿ ರೋಧನೆ ಹೇಳತಿರದು. ಇನ್ನು ಇಂದು(ಜೂ.15) ಚಿತ್ರದುರ್ಗದ ವಿಆರ್ ಎಸ್ ಬಡಾವಣೆಯಲ್ಲಿರುವ ಮೃತ ರೇಣುಕಾ ಸ್ವಾಮಿ ನಿವಾಸಕ್ಕೆ ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ(Veerendra Puppy) ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಘಟನೆ ನಡೆದು ಒಂದು ವಾರದ ಬಳಿಕ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದ ಶಾಸಕರು, ರೇಣುಕಾಸ್ವಾಮಿ ಫೋಟೋಗೆ ಹಾರ ಹಾಕಿ ಸಾಂತ್ವನ ಹೇಳಿದರು. ಈ ವೇಳೆ ಸ್ಥಳೀಯ ಮುಖಂಡರು ಸಾಥ್ ಕೊಟ್ಟಿದ್ದಾರೆ. ಇದೇ ವೇಳೆ ಮೃತ ರೇಣುಕಾಸ್ವಾಮಿ ಸ್ವಾಮಿ ಕುಟುಂಬಕ್ಕೆ ವೈಯಕ್ತಿಕವಾಗಿ ಶಾಸಕ ವಿರೇಂದ್ರ ಪಪ್ಪಿ ಎರಡು ಲಕ್ಷ ಪರಿಹಾರ ನೀಡಿದ್ದಾರೆ. ಇದೇ ವೇಳೆ ಮೃತನ ತಾಯಿ ‘ನನ್ನ ಮಗನ ಕೊಲೆಗಡುಕರಿಗೆ ಶಿಕ್ಷೆ ಆಗಲಿ ಎಂದು ಗೋಳಾಡಿದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್

