ಕೊಲೆಗಡುಕರಿಗೆ ಶಿಕ್ಷೆ ಆಗಲಿ; ಎಂಎಲ್​ಎ ಮುಂದೆ ಮೃತ ರೇಣುಕಾ ಸ್ವಾಮಿ ತಾಯಿ ಗೋಳಾಟ

ನಟ ದರ್ಶನ್​ ಮತ್ತು ಆತನ ಗ್ಯಾಂಗ್​​ನಿಂದ ಚಿತ್ರದುರ್ಗದ ರೇಣುಕಾ ಸ್ವಾಮಿ(Renuka Swamy) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇಂದು(ಜೂ.15) ಚಿತ್ರದುರ್ಗದ ವಿಆರ್ ಎಸ್ ಬಡಾವಣೆಯಲ್ಲಿರುವ ಮೃತ ರೇಣುಕಾಸ್ವಾಮಿ ನಿವಾಸಕ್ಕೆ ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ(Veerendra Puppy) ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

ಕೊಲೆಗಡುಕರಿಗೆ ಶಿಕ್ಷೆ ಆಗಲಿ; ಎಂಎಲ್​ಎ ಮುಂದೆ ಮೃತ ರೇಣುಕಾ ಸ್ವಾಮಿ ತಾಯಿ ಗೋಳಾಟ
|

Updated on:Jun 15, 2024 | 3:25 PM

ಚಿತ್ರದುರ್ಗ, ಜೂ.15: ನಟ ದರ್ಶನ್​ ಮತ್ತು ಆತನ ಗ್ಯಾಂಗ್​​ನಿಂದ ಚಿತ್ರದುರ್ಗದ ರೇಣುಕಾ ಸ್ವಾಮಿ(Renuka Swamy) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇದರ ಮಧ್ಯೆ ಮನೆಗೆ ಆಧಾರವಾಗಿದ್ದ ಮಗನನ್ನು ಕಳೆದುಕೊಂಡ ತಂದೆ-ತಾಯಿ ಮತ್ತು ಗರ್ಭಿಣಿಯಾಗಿರುವ ಮೃತನ ಪತ್ನಿ ರೋಧನೆ ಹೇಳತಿರದು. ಇನ್ನು ಇಂದು(ಜೂ.15) ಚಿತ್ರದುರ್ಗದ ವಿಆರ್ ಎಸ್ ಬಡಾವಣೆಯಲ್ಲಿರುವ ಮೃತ ರೇಣುಕಾ ಸ್ವಾಮಿ ನಿವಾಸಕ್ಕೆ ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ(Veerendra Puppy) ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಘಟನೆ ನಡೆದು ಒಂದು ವಾರದ ಬಳಿಕ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದ ಶಾಸಕರು, ರೇಣುಕಾಸ್ವಾಮಿ ಫೋಟೋಗೆ ಹಾರ ಹಾಕಿ ಸಾಂತ್ವನ ಹೇಳಿದರು. ಈ ವೇಳೆ ಸ್ಥಳೀಯ ಮುಖಂಡರು ಸಾಥ್ ಕೊಟ್ಟಿದ್ದಾರೆ. ಇದೇ ವೇಳೆ ಮೃತ ರೇಣುಕಾಸ್ವಾಮಿ ಸ್ವಾಮಿ ಕುಟುಂಬಕ್ಕೆ ವೈಯಕ್ತಿಕವಾಗಿ ಶಾಸಕ ವಿರೇಂದ್ರ ಪಪ್ಪಿ ಎರಡು ಲಕ್ಷ ಪರಿಹಾರ ನೀಡಿದ್ದಾರೆ. ಇದೇ ವೇಳೆ ಮೃತನ ತಾಯಿ ‘ನನ್ನ ಮಗನ ಕೊಲೆಗಡುಕರಿಗೆ ಶಿಕ್ಷೆ ಆಗಲಿ ಎಂದು ಗೋಳಾಡಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:24 pm, Sat, 15 June 24

Follow us
ರೇಣುಕಾ ಸ್ವಾಮಿ ಪ್ರಕರಣ: ಪವಿತ್ರಾ ಗೌಡ ಪರ ವಕೀಲರ ಆಕ್ರೋಶದ ಪ್ರತಿಕ್ರಿಯೆ
ರೇಣುಕಾ ಸ್ವಾಮಿ ಪ್ರಕರಣ: ಪವಿತ್ರಾ ಗೌಡ ಪರ ವಕೀಲರ ಆಕ್ರೋಶದ ಪ್ರತಿಕ್ರಿಯೆ
ಕೋರ್ಟ್​ ಆವರಣದಲ್ಲೂ ದರ್ಶನ್​ಗೆ ಅಭಿಮಾನಿಗಳ ಜೈಕಾರ; ವಿಡಿಯೋ ನೋಡಿ..
ಕೋರ್ಟ್​ ಆವರಣದಲ್ಲೂ ದರ್ಶನ್​ಗೆ ಅಭಿಮಾನಿಗಳ ಜೈಕಾರ; ವಿಡಿಯೋ ನೋಡಿ..
ಕಟ್ಟಡ ದಿಢೀರ್ ಕುಸಿತ; ಅವಶೇಷಗಳಡಿ ಸಿಲುಕಿದ್ದ 8 ಕಾರ್ಮಿಕರ ಪೈಕಿ 2 ರಕ್ಷಣೆ
ಕಟ್ಟಡ ದಿಢೀರ್ ಕುಸಿತ; ಅವಶೇಷಗಳಡಿ ಸಿಲುಕಿದ್ದ 8 ಕಾರ್ಮಿಕರ ಪೈಕಿ 2 ರಕ್ಷಣೆ
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ
ದರ್ಶನ್​ಗೆ ಚಿತ್ರರಂಗದಲ್ಲಿ ಬೆಳೆಯಬೇಕೆಂಬ ಛಲ ಬಂದಿದ್ದು ಹೇಗೆ?
ದರ್ಶನ್​ಗೆ ಚಿತ್ರರಂಗದಲ್ಲಿ ಬೆಳೆಯಬೇಕೆಂಬ ಛಲ ಬಂದಿದ್ದು ಹೇಗೆ?
ಜಯದೇವದಲ್ಲಿ ನೀರಿಲ್ಲದೇ ಶಸ್ತ್ರಚಿಕಿತ್ಸೆ ಸ್ಥಗಿತ, ಕ್ರಮಕ್ಕೆ ಅಶೋಕ್ ಆಗ್ರಹ
ಜಯದೇವದಲ್ಲಿ ನೀರಿಲ್ಲದೇ ಶಸ್ತ್ರಚಿಕಿತ್ಸೆ ಸ್ಥಗಿತ, ಕ್ರಮಕ್ಕೆ ಅಶೋಕ್ ಆಗ್ರಹ
ಡಿಎನ್​ಎ ಟೆಸ್ಟ್ ನಡೆದೇ ಇಲ್ಲ? ದರ್ಶನ್ ಪರ ವಕೀಲರು ಹೇಳಿದ್ದಿಷ್ಟು
ಡಿಎನ್​ಎ ಟೆಸ್ಟ್ ನಡೆದೇ ಇಲ್ಲ? ದರ್ಶನ್ ಪರ ವಕೀಲರು ಹೇಳಿದ್ದಿಷ್ಟು
ಗದಗ: ಗೋದಾಮಿನಲ್ಲಿ ಲಕ್ಷಾಂತರ ಮೌಲ್ಯದ ಅಕ್ಕಿ, ಗೋಧಿ ಹುಳುಗಳ ಪಾಲು
ಗದಗ: ಗೋದಾಮಿನಲ್ಲಿ ಲಕ್ಷಾಂತರ ಮೌಲ್ಯದ ಅಕ್ಕಿ, ಗೋಧಿ ಹುಳುಗಳ ಪಾಲು
ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿಚಾರಣೆ ಏಕೆ
ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿಚಾರಣೆ ಏಕೆ
Horoscope: ಈ ರಾಶಿಯವರಿಗೆ ಇಂದು ಪಿತ್ರಾರ್ಜಿತ ಸಂಪತ್ತಗಳು ಸಿಗುವ ಸಾಧ್ಯತೆ
Horoscope: ಈ ರಾಶಿಯವರಿಗೆ ಇಂದು ಪಿತ್ರಾರ್ಜಿತ ಸಂಪತ್ತಗಳು ಸಿಗುವ ಸಾಧ್ಯತೆ