ಜಮೀರ್ ಅಹ್ಮದ್ ತಮ್ಮ ಬುದ್ಧಿ ಮೇಲೆ ಬಿದ್ದಿರುವ ಹಿಜಾಬ್ ಮೊದಲು ತೆಗೆಯಲಿ ಅಂದರು ಬಿಜೆಪಿ ವಕ್ತಾರೆ ಮಾಳವಿಕಾ ಅವಿನಾಶ್

ಎಲ್ಲಕ್ಕಿಂತ ಮೊದಲು ಅವರು ತಮ್ಮ ಬುದ್ಧಿಗೆ ಹಾಕಿಕೊಂಡಿರುವ ಹಿಜಾಬ್ ತೆಗೆದು ಹಾಕಬೇಕು. ಅವರು ಸಲಹೆ ನೀಡಬೇಕಿರುವುದು ಪುರುಷರಿಗೆ, ಮಹಿಳೆಯರಿಗಲ್ಲ. ಹೆಣ್ಣನ್ನು ಅವರು ಭೋಗದ ವಸ್ತು ಅಂದುಕೊಂಡಿದ್ದಾರೆ, ಆ ಮಾನಸಿಕತೆ ಬದಲಾಗಬೇಕು ಎಂದು ಮಾಳವಿಕಾ ಹೇಳಿದರು.

ಜಮೀರ್ ಅಹ್ಮದ್ ತಮ್ಮ ಬುದ್ಧಿ ಮೇಲೆ ಬಿದ್ದಿರುವ ಹಿಜಾಬ್ ಮೊದಲು ತೆಗೆಯಲಿ ಅಂದರು ಬಿಜೆಪಿ ವಕ್ತಾರೆ ಮಾಳವಿಕಾ ಅವಿನಾಶ್
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Feb 15, 2022 | 9:49 PM

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ (Zameer Ahmed) ಬೆಂಗಳೂರಿನಲ್ಲಿ ರವಿವಾರಂದು ಹಿಜಾಬ್ (hijab) ಹಾಕದಿದ್ದರೆ ರೇಪ್​ಗಳಾಗುತ್ತವೆ, ಭಾರತದಲ್ಲಿ ಅತ್ಯಾಚಾರದ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಹಿಜಾಬ್ ಧರಿಸದಿರುವುದೇ ಕಾರಣ ಆಂತ ಹೇಳಿ ಸೋವಾವಾರ ಹುಬ್ಬಳ್ಳಿಯಲ್ಲಿ ನಾನು ಹಾಗೆ ಹೇಳಿಲ್ಲ, ಅದನ್ನು ತಪ್ಪಾಗಿ ಗ್ರಹಿಸಲಾಗಿದೆ ಅಂತ ಯು-ಟರ್ನ್ ತೆಗೆದುಕೊಂಡ ಬಳಿಕ ತಾವಾಡಿದ ಮಾತು ಸರಿಯಲ್ಲ ಅಂತ ಗೊತ್ತಾಗಿ ಕ್ಷಮೆಯನ್ನೂ ಕೇಳಿದರು. ಅವರ ಹೇಳಿಕೆಯನ್ನು ಕಾಂಗ್ರೆಸ್ ನಾಯಕರೇ ಖಂಡಿಸಿದರು. ಬಿಡಿ ಅದು ಬೇರೆ ವಿಷಯ. ರಾಜ್ಯ ಬಿಜೆಪಿ ಘಟಕದ ವಕ್ತಾರೆ ಮಾಳವಿಕಾ ಅವಿನಾಶ್ (Malavika Avinash) ಅವರನ್ನು ಜಮೀರ್ ಕ್ಷಮೆ ಕೇಳಿರುವ ಕುರಿತು ಮಾಧ್ಯಮದವರು ಕೇಳಿದಾಗ ಕ್ಷಮೆ ಕೇಳುವುದರಲ್ಲಿ ಅರ್ಥವಿಲ್ಲ, ಅವರ ಮಾನಸಿಕತೆ ಬದಲಾಗಬೇಕು ಎಂದು ಹೇಳಿದರು.

ಕ್ಷಮೆ ಕೇಳುವುದರಿಂದ ಜಮೀರ್ ಅವರ ಮಾನಸಿಕತೆ ಬದಲಾಗಲಾರದು ಮೊದಲು ಅದು ಬದಲಾಗಬೇಕು. ಎಲ್ಲಕ್ಕಿಂತ ಮೊದಲು ಅವರು ತಮ್ಮ ಬುದ್ಧಿಗೆ ಹಾಕಿಕೊಂಡಿರುವ ಹಿಜಾಬ್ ತೆಗೆದು ಹಾಕಬೇಕು. ಅವರು ಸಲಹೆ ನೀಡಬೇಕಿರುವುದು ಪುರುಷರಿಗೆ, ಮಹಿಳೆಯರಿಗಲ್ಲ. ಹೆಣ್ಣನ್ನು ಅವರು ಭೋಗದ ವಸ್ತು ಅಂದುಕೊಂಡಿದ್ದಾರೆ, ಆ ಮಾನಸಿಕತೆ ಬದಲಾಗಬೇಕು ಎಂದು ಮಾಳವಿಕಾ ಹೇಳಿದರು.

ಕಾಂಗ್ರೆಸ್ ಶಾಸಕ ತಮ್ಮ ಬುದ್ಧಿ ಸರಿಮಾಡಿಕೊಂಡು ಹೆಣ್ಣುಮಕ್ಕಳನ್ನು ಗೌರವದಿಂದ ಕಾಣಬೇಕು ಎಂಬ ಸಂಗತಿಯನ್ನು ಮೊದಲು ತಾವು ಅರಿತುಕೊಂಡು ಬಳಿಕ ತಮ್ಮ ಸುತ್ತಮುತ್ತ ಇರುವ ಗಂಡಸರಿಗೆ ಸಲಹೆ ನೀಡಲಿ ಎಂದು ಮಾಳವಿಕಾ ಖಾರವಾಗಿ ಹೇಳಿದರು.

ಇದನ್ನೂ ಓದಿ:   ಹಿಜಾಬ್ ಬಗ್ಗೆ ಕೋರ್ಟ್ ಆದೇಶ ಮಕ್ಕಳಿಗೆ ಅರ್ಥವಾಗುವುದಿಲ್ಲ, ಶಿಕ್ಷಕರು ಅದನ್ನು ವಿವರಿಸಬೇಕು ಎನ್ನುತ್ತಾರೆ ಮೈಸೂರು ಡಿಡಿಪಿಐ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​