AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಾಂಬೆ ಸನ್ನಿಧಿಯಲ್ಲಿ ಆಕರ್ಷಕ ಬೆಳಕಿನ ಚಿತ್ತಾರ: ಕಣ್ತುಂಬಿಕೊಂಡ ಭಕ್ತಸಾಗರ

ಈ ಬಾರಿಯ ಹಾಸನಾಂಬೆ ದರ್ಶನ ಸಂಭ್ರಮ ಸಡಗರ ಕೇವಲ ಹಾಸನಕ್ಕೆ ಮಾತ್ರವಲ್ಲ. ನಾಡಿನ ಲಕ್ಷ ಲಕ್ಷ ಜನರು ಹಾಸನಾಂಬೆಯನ್ನ ಕಣ್ತುಂಬಿಕೊಂಡು ಸಂಭ್ರಮಿಸುತ್ತಿದ್ದಾರೆ. ಹಾಸನದತ್ತ ಜನ ಸಾಗರವೇ ಹರಿದು ಬರುತ್ತಿದ್ದು ಅದ್ದೂರಿ ಆಚರಣೆಗೆ ಮನಸೋಲುತ್ತಿದ್ದಾರೆ. ಅದ್ರಲ್ಲೂ ಹಾಸನ ನಗರದ ತುಂಬೆಲ್ಲಾ ಮೈಸೂರು ದಸರಾ ಮಾದರಿಯಲ್ಲಿ ಮಾಡಲಾಗಿರುವ ವಿದ್ಯುತ್ ದೀಪಾಲಂಕಾರ ಕಣ್ಮನ ಸೆಳೆಯುತ್ತಿದೆ.

ಮಂಜುನಾಥ ಕೆಬಿ
| Edited By: |

Updated on: Oct 29, 2024 | 9:28 AM

Share

ಹಾಸನ, ಅಕ್ಟೋಬರ್ 29: ಜಗಮಗಿಸುತ್ತಿರುವ ಬಣ್ಣ ಬಣ್ಣದ ಲೈಟಿಂಗ್ ಅಲಂಕಾರ ಕಣ್ತುಂಬಿಕೊಳ್ಳುತ್ತಾ ಹಾಸನಾಂಬೆಯ ಆಶೀರ್ವಾದ ಪಡೆದು ಧನ್ಯರಾಗುತ್ತಿರುವ ಭಕ್ತರು, ಈ ಬಾರಿಯ ಉತ್ಸವವನ್ನು ಅವಿಸ್ಮರಣೀಯಗೊಳಿಸುತ್ತಿದ್ದಾರೆ. ಅದರಲ್ಲೂ ಲೈಟಿಂಗ್ ವೀಕ್ಷಣೆಗೆ ಬಂದಿರುವ ಅಂಬಾರಿ ಬಸ್ ಏರಿ ಭಕ್ತರು ಸಂಭ್ರಮಿಸಿದ್ದಾರೆ. ಸ್ವತಃ ಸಿಎಂ ಸಿದ್ದರಾಮಯ್ಯ ಕೂಡ ಅಂಬಾರಿ ಸವಾರಿ ಮಾಡಿದ್ದಾರೆ.

ಈ ಬಾರಿಯ ಹಾಸನಾಂಬೆ ಉತ್ಸವ ಹಲವು ಕಾರಣಗಳಿಗೆ ರಾಜ್ಯದಲ್ಲಿ ಸದ್ದು ಮಾಡುತ್ತಿದೆ. ಲಕ್ಷ ಲಕ್ಷ ಸಂಖ್ಯೆಯಲ್ಲಿ ಬರುತ್ತಿರುವ ಭಕ್ತರ ದಂಡು, ಕೋಟಿ ಕೋಟಿ ಲೆಕ್ಕದಲ್ಲಿ ಖಜಾನೆ ತುಂಬುತ್ತಿರುವ ಆದಾಯದ ಜೊತೆಗೆ ಸಾಗರೋಪಾದಿಯಲ್ಲಿ ಹಾಸನದತ್ತ ಬರುತ್ತಿರುವ ಭಕ್ತರಿಗೆ ಮುದ ನೀಡುತ್ತಿದೆ ಹಾಸನ ನಗರದ ತುಂಬೆಲ್ಲಾ ಮಾಡಲಾಗಿರುವ ಜಗಮಗಿಸುವ ದೀಪಾಲಂಕಾರ. ಹಗಲಿನಲ್ಲಿ ಹಾಸನಾಂಬೆ ಕಣ್ತುಂಬಿಕೊಳ್ಳುವ ಭಕ್ತರು ರಾತ್ರಿಯಾಗುತ್ತಲೇ ಹೊಸ ಜಗತ್ತೇ ತೆರೆದುಕೊಂಡಂತೆ ಭಾಸವಾಗುವ ಹಾಸನದಲ್ಲಿ ಸುತ್ತಾಡುತ್ತಾ ಎಂಜಾಯ್ ಮಾಡುತ್ತಿದ್ದಾರೆ. ನಗರದ ಬಿಎಂ ರಸ್ತೆ ಹಳೆ ಬಸ್ ನಿಲ್ದಾಣ ರಸ್ತೆ, ಸಂತೆಪೇಟೆ ರಸ್ತೆ, ಸಾಲಗಾಮೆ ರಸ್ತೆ, ಕಾಲೇಜು ರಸ್ತೆ ಹೀಗೆ ಹತ್ತಾರು ಕಿಲೋಮೀಟರ್ ಮಾರ್ಗದಲ್ಲಿ ಒಂದೊಂದು ಕಡೆ ಒಂದೊಂದು ರೀತಿಯ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.

ಕರ್ನಾಟಕ ಸಂಬಂಧಿತ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!