AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಾಂಬೆ ಸನ್ನಿಧಿಯಲ್ಲಿ ಆಕರ್ಷಕ ಬೆಳಕಿನ ಚಿತ್ತಾರ: ಕಣ್ತುಂಬಿಕೊಂಡ ಭಕ್ತಸಾಗರ

ಈ ಬಾರಿಯ ಹಾಸನಾಂಬೆ ದರ್ಶನ ಸಂಭ್ರಮ ಸಡಗರ ಕೇವಲ ಹಾಸನಕ್ಕೆ ಮಾತ್ರವಲ್ಲ. ನಾಡಿನ ಲಕ್ಷ ಲಕ್ಷ ಜನರು ಹಾಸನಾಂಬೆಯನ್ನ ಕಣ್ತುಂಬಿಕೊಂಡು ಸಂಭ್ರಮಿಸುತ್ತಿದ್ದಾರೆ. ಹಾಸನದತ್ತ ಜನ ಸಾಗರವೇ ಹರಿದು ಬರುತ್ತಿದ್ದು ಅದ್ದೂರಿ ಆಚರಣೆಗೆ ಮನಸೋಲುತ್ತಿದ್ದಾರೆ. ಅದ್ರಲ್ಲೂ ಹಾಸನ ನಗರದ ತುಂಬೆಲ್ಲಾ ಮೈಸೂರು ದಸರಾ ಮಾದರಿಯಲ್ಲಿ ಮಾಡಲಾಗಿರುವ ವಿದ್ಯುತ್ ದೀಪಾಲಂಕಾರ ಕಣ್ಮನ ಸೆಳೆಯುತ್ತಿದೆ.

ಮಂಜುನಾಥ ಕೆಬಿ
| Edited By: |

Updated on: Oct 29, 2024 | 9:28 AM

Share

ಹಾಸನ, ಅಕ್ಟೋಬರ್ 29: ಜಗಮಗಿಸುತ್ತಿರುವ ಬಣ್ಣ ಬಣ್ಣದ ಲೈಟಿಂಗ್ ಅಲಂಕಾರ ಕಣ್ತುಂಬಿಕೊಳ್ಳುತ್ತಾ ಹಾಸನಾಂಬೆಯ ಆಶೀರ್ವಾದ ಪಡೆದು ಧನ್ಯರಾಗುತ್ತಿರುವ ಭಕ್ತರು, ಈ ಬಾರಿಯ ಉತ್ಸವವನ್ನು ಅವಿಸ್ಮರಣೀಯಗೊಳಿಸುತ್ತಿದ್ದಾರೆ. ಅದರಲ್ಲೂ ಲೈಟಿಂಗ್ ವೀಕ್ಷಣೆಗೆ ಬಂದಿರುವ ಅಂಬಾರಿ ಬಸ್ ಏರಿ ಭಕ್ತರು ಸಂಭ್ರಮಿಸಿದ್ದಾರೆ. ಸ್ವತಃ ಸಿಎಂ ಸಿದ್ದರಾಮಯ್ಯ ಕೂಡ ಅಂಬಾರಿ ಸವಾರಿ ಮಾಡಿದ್ದಾರೆ.

ಈ ಬಾರಿಯ ಹಾಸನಾಂಬೆ ಉತ್ಸವ ಹಲವು ಕಾರಣಗಳಿಗೆ ರಾಜ್ಯದಲ್ಲಿ ಸದ್ದು ಮಾಡುತ್ತಿದೆ. ಲಕ್ಷ ಲಕ್ಷ ಸಂಖ್ಯೆಯಲ್ಲಿ ಬರುತ್ತಿರುವ ಭಕ್ತರ ದಂಡು, ಕೋಟಿ ಕೋಟಿ ಲೆಕ್ಕದಲ್ಲಿ ಖಜಾನೆ ತುಂಬುತ್ತಿರುವ ಆದಾಯದ ಜೊತೆಗೆ ಸಾಗರೋಪಾದಿಯಲ್ಲಿ ಹಾಸನದತ್ತ ಬರುತ್ತಿರುವ ಭಕ್ತರಿಗೆ ಮುದ ನೀಡುತ್ತಿದೆ ಹಾಸನ ನಗರದ ತುಂಬೆಲ್ಲಾ ಮಾಡಲಾಗಿರುವ ಜಗಮಗಿಸುವ ದೀಪಾಲಂಕಾರ. ಹಗಲಿನಲ್ಲಿ ಹಾಸನಾಂಬೆ ಕಣ್ತುಂಬಿಕೊಳ್ಳುವ ಭಕ್ತರು ರಾತ್ರಿಯಾಗುತ್ತಲೇ ಹೊಸ ಜಗತ್ತೇ ತೆರೆದುಕೊಂಡಂತೆ ಭಾಸವಾಗುವ ಹಾಸನದಲ್ಲಿ ಸುತ್ತಾಡುತ್ತಾ ಎಂಜಾಯ್ ಮಾಡುತ್ತಿದ್ದಾರೆ. ನಗರದ ಬಿಎಂ ರಸ್ತೆ ಹಳೆ ಬಸ್ ನಿಲ್ದಾಣ ರಸ್ತೆ, ಸಂತೆಪೇಟೆ ರಸ್ತೆ, ಸಾಲಗಾಮೆ ರಸ್ತೆ, ಕಾಲೇಜು ರಸ್ತೆ ಹೀಗೆ ಹತ್ತಾರು ಕಿಲೋಮೀಟರ್ ಮಾರ್ಗದಲ್ಲಿ ಒಂದೊಂದು ಕಡೆ ಒಂದೊಂದು ರೀತಿಯ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.

ಕರ್ನಾಟಕ ಸಂಬಂಧಿತ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್