ಕೋರ್ಟ್ ಕಲಾಪಕ್ಕೂ ತಟ್ಟಿದ ಲೋಡ್ ಶೆಡ್ಡಿಂಗ್ , ಮೊಬೈಲ್ ಟಾರ್ಚ್​ನಲ್ಲೇ ಪ್ರಕರಣ ವಿಚಾರಣೆ

ಮಹೇಶ್ ಇ, ಭೂಮನಹಳ್ಳಿ Edited By: ಕಿರಣ್ ಹನುಮಂತ್​ ಮಾದಾರ್

Updated on: Oct 11, 2023 | 5:00 PM

ತುಮಕೂರು ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯದ ಸಂಕೀರ್ಣದಲ್ಲಿ, ಬಾಕಿ ಇದ್ದ ಪ್ರಕರಣಗಳ ಕುರಿತು ಕಲಾಪ ನಡೆಸುತ್ತಿದ್ದರು. ಈ ವೇಳೆ ಬೆಸ್ಕಾಂ ವಿದ್ಯುತ್ ಲೋಡ್ ಶೆಡ್ಡಿಂಗ್ ಮಾಡಿದ್ದು, ಪರ್ಯಾಯ ವ್ಯವಸ್ಥೆ ಇಲ್ಲದೇ ಮೊಬೈಲ್ ಟಾರ್ಚ್ ಬಳಸಿ ವಕೀಲರ ಹಾಗೂ ಸಾರ್ವಜನಿಕರ ಅಹವಾಲು ನಡೆಸಲಾಗಿದೆ.

ತುಮಕೂರು, ಅ.11: ಕೋರ್ಟ್ ಕಲಾಪಕ್ಕೂ ವಿದ್ಯುತ್ ಲೋಡ್ ಶೆಡ್ಡಿಂಗ್ ಎಫೆಕ್ಟ್ ತಟ್ಟಿದೆ. ಹೌದು, ಇಂದು(ಅ.11) ಎಸಿ ಗೌರವಕುಮಾರ್ ಶೆಟ್ಟಿ ಅವರು  ತುಮಕೂರು(Tumakuru) ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯದ ಸಂಕೀರ್ಣದಲ್ಲಿ, ಬಾಕಿ ಇದ್ದ ಪ್ರಕರಣಗಳ ಕುರಿತು ಕಲಾಪ ನಡೆಸುತ್ತಿದ್ದರು. ಈ ವೇಳೆ ಬೆಸ್ಕಾಂ ವಿದ್ಯುತ್ ಲೋಡ್ ಶೆಡ್ಡಿಂಗ್ ಮಾಡಿದ್ದು, ಪರ್ಯಾಯ ವ್ಯವಸ್ಥೆ ಇಲ್ಲದೇ ಮೊಬೈಲ್ ಟಾರ್ಚ್ ಬಳಸಿ ವಕೀಲರ ಹಾಗೂ ಸಾರ್ವಜನಿಕರ ಅಹವಾಲು ನಡೆಸಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲೇ ಹೀಗಾದರೇ ಜನಸಾಮಾನ್ಯರ ಪಾಡೇನು ಎಂದು ಸಾರ್ವಜನಿಕರು ಪ್ರಶ್ನಿಸಿದ್ದು, ಸಾರ್ವಜನಿಕ ವಲಯದಲ್ಲಿ ಜಿಲ್ಲಾಧಿಕಾರಿ ಕಚೇರಿ ಕಾರ್ಯ ವೈಖರಿ ಬಗ್ಗೆ ಅಪಸ್ವರ ಕೇಳಿಬರುತ್ತಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮಹೇಶ್ ಇ, ಭೂಮನಹಳ್ಳಿ

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...