‘ನನ್ನ ಕನಸಿನ ಭಾರತ ಹೇಗಿರಬೇಕು ಅಂತ ಹೇಳಿದ್ರೆ ಕಾಂಟ್ರವರ್ಸಿ ಆಗತ್ತೆ’: ಧ್ರುವ ಸರ್ಜಾ

|

Updated on: Apr 26, 2024 | 5:30 PM

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು (ಏ.26) ಮತದಾನ ನಡೆಯುತ್ತಿದೆ. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಕೂಡ ಮತದಾನ ಮಾಡಿದ್ದಾರೆ. ಎಲ್ಲರೂ ಮತದಾನ ಮಾಡಬೇಕು ಎಂದು ಸೆಲೆಬ್ರಿಟಿಗಳು ಪ್ರೇರೇಪಿಸಿದ್ದಾರೆ. ಬೆಂಗಳೂರಿನಲ್ಲಿ ಧ್ರುವ ಸರ್ಜಾ ಅವರು ಪತ್ನಿ ಪ್ರೇರಣಾ ಜೊತೆ ಬಂದು ಓಟ್​ ಮಾಡಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ..

ನಟ ಧ್ರುವ ಸರ್ಜಾ (Dhruva Sarja) ಅವರು ‘ಮಾರ್ಟಿನ್​’, ‘ಕೆಡಿ’ ಮುಂತಾದ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಇಂದು (ಏಪ್ರಿಲ್​ 26) ಅವರು ಸಿನಿಮಾ ಕೆಲಸಗಳಿಗೆ ಬ್ರೇಕ್​ ನೀಡಿ ಮತದಾನ ಮಾಡಲು ಬಂದಿದ್ದಾರೆ. ಬೆಂಗಳೂರಿನಲ್ಲಿ ಧ್ರುವ ಸರ್ಜಾ ಅವರು ಓಟ್​ ಮಾಡಿದ್ದಾರೆ. ಅವರ ಜೊತೆ ಪತ್ನಿ ಪ್ರೇರಣಾ ಕೂಡ ಬಂದು ಮತ ಚಲಾಯಿಸಿದ್ದಾರೆ. ಮತದಾನ (Voting) ಮಾಡಿದ ಬಳಿಕ ಧ್ರುವ ಸರ್ಜಾ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂದರ್ಭದಲ್ಲಿ ತಮ್ಮ ಕನಸಿನ ಭಾರತ ಹೇಗಿರಬೇಕು ಎಂಬ ಪ್ರಶ್ನೆ ಅವರಿಗೆ ಕೇಳಲಾಗಿದೆ. ‘ಮುಂದೆ ಯಾರ ಸರ್ಕಾರ ಬರುತ್ತೆ ಅನ್ನೋದನ್ನು ನೋಡೋಣ. ನನ್ನ ಕನಸಿನ ಭಾರತ ಹೇಗಿರಬೇಕು ಅಂತ ಹೇಳಿದರೆ ಕಾಂಟ್ರವರ್ಸಿ ಆಗುತ್ತೆ. ಹಾಗಾಗಿ ಅದರ ಬಗ್ಗೆ ಮಾತಾಡೋದು ಬೇಡ. ಜೈ ಶ್ರೀರಾಮ್​, ಜೈ ಆಂಜನೇಯ’ ಎಂದಿದ್ದಾರೆ ಧ್ರುವ ಸರ್ಜಾ. ‘ಮತದಾನ ಮಾಡುವುದು ಪ್ರತಿಯೊಬ್ಬರ ಹಕ್ಕು. ಸಂಜೆ 6 ಗಂಟೆ ತನಕ ಸಮಯ ಇದೆ. ದಯವಿಟ್ಟು ಎಲ್ಲರೂ ಬಂದು ಮತ ಚಲಾಯಿಸಿ ’ ಎಂದು ಧ್ರುವ ಸರ್ಜಾ ಮನವಿ ಮಾಡಿದ್ದಾರೆ. ‘ನಮ್ಮ ಮನೆಯಲ್ಲಿ ಕೆಲಸ ಮಾಡುವ ಎಲ್ಲರೂ ಓಟ್​ ಮಾಡಲು ರಜೆ ತೆಗೆದುಕೊಂಡಿದ್ದಾರೆ. ಅದೇ ರೀತಿ ಎಲ್ಲರೂ ಅವರವರ ಊರುಗಳಿಗೆ ಹೋಗಿ ಮತದಾನ ಮಾಡುತ್ತಿದ್ದಾರೆ’ ಎಂದು ಧ್ರುವ ಸರ್ಜಾ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us on