Lok Sabha Election 2024: ಸ್ಟ್ರಾಂಗ್ ರೂಮ್​​ ಕೀ ಮನೆಯಲ್ಲೇ ಬಿಟ್ಟು ಬಂದ ಅಧಿಕಾರಿ!

Edited By:

Updated on: Jun 04, 2024 | 8:19 AM

ವಿಜಯಪುರದಲ್ಲಿ ಅಧಿಕಾರಿ ಸ್ಟ್ರಾಂಗ್ ರೂಮ್​ನ ಬೀಗದ ಕೈ ಮನೆಯಲ್ಲೇ ಮರೆತು ಬಂದ ಪ್ರಸಂಗ ನಡೆದಿದೆ. ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ಶರೀಫ್ ಅವರು ಸ್ಟ್ರಾಂಗ್ ರೂಮ್​ನ ಬೀಗದ ಕೈಯನ್ನು ಮನೆಯಲ್ಲೇ ಬಿಟ್ಟು ಬಂದಿದ್ದರು. ಲಾಕ್ ಓಪನ್ ಮಾಡಲು ಹೋದಾಗ ತಮ್ಮ ಬಳಿ ಕೀ ಇಲ್ಲದಿರುವುದು ತಿಳಿದುಬಂದಿದೆ.

ವಿಜಯಪುರ, ಜೂನ್.04: ಲೋಕಸಭಾ ಚುನಾವಣೆ 2024ರ ಫಲಿತಾಂಶಕ್ಕೆ ಇನ್ನು ಕೆಲವೇ ಗಂಟೆಗಳು ಮಾತ್ರ ಬಾಕಿ ಇವೆ. ಈಗಾಗಲೇ ಎಲ್ಲಾ ಕಡೆ ಬಹುತೇಕ ಸ್ಟ್ರಾಂಗ್ ರೂಮ್​ಗಳು ಓಪನ್ ಆಗಿದ್ದು ಅಂಚೆ ಮತ ಎಣಿಕೆ ಕೂಡ ಆರಂಭವಾಗಿದೆ. ಆದರೆ ವಿಜಯಪುರದಲ್ಲಿ ಅಧಿಕಾರಿ ಸ್ಟ್ರಾಂಗ್ ರೂಮ್​ನ ಬೀಗದ ಕೈ ಮನೆಯಲ್ಲೇ ಮರೆತು ಬಂದ ಪ್ರಸಂಗ ನಡೆದಿದೆ.

ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ಶರೀಫ್ ಅವರು ಸ್ಟ್ರಾಂಗ್ ರೂಮ್​ನ ಬೀಗದ ಕೈಯನ್ನು ಮನೆಯಲ್ಲೇ ಬಿಟ್ಟು ಬಂದಿದ್ದರು. ಲಾಕ್ ಓಪನ್ ಮಾಡಲು ಹೋದಾಗ ತಮ್ಮ ಬಳಿ ಕೀ ಇಲ್ಲದಿರುವುದು ತಿಳಿದುಬಂದಿದೆ. ತಕ್ಷಣವೇ ಶರೀಫ್ ತಮ್ಮ ಮನೆಗೆ ಹಿಂದಿರುಗಿದ್ದು ಕೀ ತಂದು ಈಗ ಸ್ಟ್ರಾಂಗ್ ರೂಮ್ ಓಪನ್ ಮಾಡಿದ್ದಾರೆ. ಅಧಿಕಾರಿಯ ಎಡವಟ್ಟಿನಿಂದಾಗಿ ಸ್ಟ್ರಾಂಗ್ ರೂಮ್ ಓಪನ್ ಮಾಡಲು ಕೊಂಚ ತಡವಾಯಿತು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನ ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published on: Jun 04, 2024 08:19 AM
Follow Us
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More