ಕೋಲಾರ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರ ಅಸಮಾಧಾನ ಸ್ಫೋಟ; ಬೆಂಬಲಿಗರ ನಡುವೆ ಗಲಾಟೆ
ಲೋಕಸಭಾ ಕಾವು ಜೋರಾಗಿದ್ದು, ಈ ಮಧ್ಯೆ ಕೋಲಾರ ಕ್ಷೇತ್ರದಲ್ಲಿ ಬಿಜೆಪಿ(BJP) ಮುಖಂಡರ ಅಸಮಾಧಾನ ಸ್ಫೋಟವಾಗಿದ್ದು, ಜಿಲ್ಲೆಯ ಬಂಗಾರಪೇಟೆಯಲ್ಲಿ(Bangarapet) ಸಂಸದ ಮುನಿಸ್ವಾಮಿ ಮತ್ತು ಮಾಜಿ ಶಾಸಕ ವೆಂಕಟಮುನಿಯಪ್ಪ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದಿದೆ. ಎಸ್ಸಿ ಸಮುದಾಯದ ಸಭೆಗೆ ಕರೆದಿಲ್ಲ ಎಂಬ ಕಾರಣಕ್ಕೆ ಅಸಮಾಧಾನ ಹೊರಹಾಕಿದ್ದಾರೆ.
ಕೋಲಾರ, ಏ.11: ಕೋಲಾರ ಕ್ಷೇತ್ರದಲ್ಲಿ ಬಿಜೆಪಿ(BJP) ಮುಖಂಡರ ಅಸಮಾಧಾನ ಸ್ಫೋಟವಾಗಿದ್ದು, ಜಿಲ್ಲೆಯ ಬಂಗಾರಪೇಟೆಯಲ್ಲಿ(Bangarapet) ಸಂಸದ ಮುನಿಸ್ವಾಮಿ ಮತ್ತು ಮಾಜಿ ಶಾಸಕ ವೆಂಕಟಮುನಿಯಪ್ಪ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದಿದೆ. ಎಸ್ಸಿ ಸಮುದಾಯದ ಸಭೆಗೆ ಕರೆದಿಲ್ಲ ಎಂಬ ಕಾರಣಕ್ಕೆ ಅಸಮಾಧಾನ ಹೊರಹಾಕಿದ್ದಾರೆ. ಸಂಸದ ಮುನಿಸ್ವಾಮಿ ಬೆಂಬಲಿಗ ಆಗಿರುವ ಎಸ್ಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಹನುಮಂತಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಿಲ್ಲ ಎಂದು ಬೇಸರವಾಗಿದೆ ಎಂದು ಸಂಸದರ ವಿರುದ್ಧ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಕಿಡಿಕಾರಿದ್ದಾರೆ. ಈ ಕುರಿತು ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಮನವೊಲಿಸುವ ಯತ್ನ ನಡೆದಿತ್ತಾದರೂ, ಅಶೋಕ್ ನಿರ್ಗಮನ ನಂತರ ಬೆಂಬಲಿಗರ ನಡುವೆ ವಾಗ್ವಾದ ಶುರುವಾಗಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ ಆಗಿದ್ದೇನು? ವಿಡಿಯೋ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ


