ಸಿಎಂ ಡಿಕೆ ಶಿವಕುಮಾರ್ ಕ್ಯಾಬಿನೆಟ್ನ ನೂತನ ಸಚಿವರ ಪ್ರಮಾಣ ವಚನಕ್ಕೆ ಸಜ್ಜಾದ ಲೋಕಭವನ
ಇಂದು ಸಂಜೆ 5 ಗಂಟೆಗೆ ಲೋಕಭವನದ ಗಾಜಿನ ಮನೆಯಲ್ಲಿ 20 ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ರಾಜ್ಯಪಾಲರು, ಸಿಎಂ, ಡಿಸಿಎಂ ಸೇರಿದಂತೆ ನಿಯೋಜಿತ ಸಚಿವರು, ಕುಟುಂಬಸ್ಥರು ಮತ್ತು ಗಣ್ಯರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ. ಕನ್ನಡ ಬಾವುಟಗಳಿಂದ ಅಲಂಕೃತಗೊಂಡಿರುವ ಲೋಕಭವನದಲ್ಲಿ ಅಗತ್ಯ ಭದ್ರತಾ ವ್ಯವಸ್ಥೆಗಳೊಂದಿಗೆ ಸಿದ್ಧತೆ ಪೂರ್ಣಗೊಂಡಿದೆ.
ಬೆಂಗಳೂರು, ಆಗಸ್ಟ್ 03: ರಾಜ್ಯ ಸಂಪುಟದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್ ಸಜ್ಜಾಗಿದೆ. ಇಡೀ ಗ್ಲಾಸ್ ಹೌಸ್ ಕನ್ನಡದ ಬಾವುಟಗಳಿಂದ ಅಲಂಕರಿಸಲಾಗಿದೆ. ಸಿಎಂ ಡಿಕೆ ಶಿವಕುಮಾರ್ ಸಂಪುಟಕ್ಕೆ ಸೇರ್ಪಡೆಯಾಗಲಿರುವ 20 ನೂತನ ಸಚಿವರು ಸಂಜೆ 5 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯ ವೇದಿಕೆಯ ಮೇಲೆ ರಾಜ್ಯಪಾಲರು, ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ. ವೇದಿಕೆಯ ಮುಂಭಾಗದಲ್ಲಿ ನಿಯೋಜಿತ ಸಚಿವರು ಕುಳಿತುಕೊಳ್ಳಲು 20 ಪ್ರತ್ಯೇಕ ಆಸನಗಳನ್ನು ಕಾಯ್ದಿರಿಸಲಾಗಿದ್ದು, ಐದೈದು ಜನರ ತಂಡವಾಗಿ ಅಥವಾ ಒಬ್ಬೊಬ್ಬರಾಗಿ ವೇದಿಕೆಗೆ ತೆರಳಿ ಪ್ರಮಾಣ ವಚನ ಸ್ವೀಕರಿಸಲು ಅನುಕೂಲವಾಗುವಂತೆ ವಿಶೇಷ ಮಾರ್ಗವನ್ನು ನಿರ್ಮಿಸಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

