AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಡ ಕುಸಿತ ಸ್ಥಳದಲ್ಲೇ ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ

ಕಟ್ಟಡ ಕುಸಿತ ಸ್ಥಳದಲ್ಲೇ ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ

ಗಂಗಾಧರ​ ಬ. ಸಾಬೋಜಿ
|

Updated on: Oct 23, 2024 | 9:23 PM

Share

ಬೆಂಗಳೂರಿನ ಬಾಬುಸಾಬ್​ಪಾಳ್ಯದಲ್ಲಿ ಕಟ್ಟಡ ಕುಸಿತ ದುರಂತದಲ್ಲಿ ಸದ್ಯ 8 ಜನ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿ ಅಮಾನತು ಮಾಡಲಾಗಿದೆ. ಇದೀಗ ಘಟನೆ ನಡೆದ ಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್​ ಪಾಟೀಲ್ ಹಾಗೂ ಉಪಲೋಕಾಯುಕ್ತರಾದ ನ್ಯಾ.ಕೆ.ಎನ್.ಫಣೀಂದ್ರ ಭೇಟಿ ನೀಡಿ ಬಿಬಿಎಂಪಿ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ.

ಬೆಂಗಳೂರು, ಅಕ್ಟೋಬರ್​ 23: ನಗರದ ಬಾಬುಸಾಬ್‌ಪಾಳ್ಯದಲ್ಲಿ ಕಟ್ಟಡ ಕುಸಿದ ಘಟನಾ ಸ್ಥಳಕ್ಕೆ ಇಂದು ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್​ ಪಾಟೀಲ್ ಹಾಗೂ ಉಪಲೋಕಾಯುಕ್ತರಾದ ನ್ಯಾ.ಕೆ.ಎನ್.ಫಣೀಂದ್ರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸ್ಥಳದಲ್ಲೇ ಲೋಕಾಯುಕ್ತ ನ್ಯಾಯಮೂರ್ತಿ B.S.ಪಾಟೀಲ್​ ಬಿಬಿಎಂಪಿ (BBMP) ವಲಯ ಆಯುಕ್ತ ರಮೇಶ್‌ ಹಾಗೂ ಎಇ ರಮೇಶ್‌ಗೆ ತರಾಟೆ ತೆಗೆದುಕೊಂಡಿದ್ದಾರೆ. ಬಿ ಖಾತಾ ಸೈಟ್‌ನಲ್ಲಿ ಕಟ್ಟಡ ನಿರ್ಮಿಸುತ್ತಿದ್ದರೂ ಏಕೆ ಕ್ರಮ ಕೈಗೊಂಡಿಲ್ಲ. ಬೆಂಗಳೂರಿನಲ್ಲಿ ಇನ್ನೂ ಈ ರೀತಿಯ ಕಟ್ಟಡಗಳು ಎಷ್ಟು ನಿರ್ಮಿಸಲಾಗುತ್ತಿದೆ. ನೀವು ಏನು ಕೆಲಸ ಮಾಡುತ್ತೀದ್ದೀರಿ ಎಂದು ಪ್ರಶ್ನಿಸಿದ್ದಾರೆ. ಲೋಕಾಯುಕ್ತ ನ್ಯಾ.B.S.ಪಾಟೀಲ್ ಪ್ರಶ್ನೆಗೆ BBMP ಅಧಿಕಾರಿಗಳು ತಬ್ಬಿಬ್ಬಾಗಿದ್ದಾರೆ.

ವರದಿ: ಪ್ರದೀಪ್​ ಕ್ರೈಂ 

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More