Lokayukta Raid: ಸಣ್ಣ ನೀರಾವರಿ ಇಲಾಖೆ-ಬಿಬಿಎಂಪಿ ಇಂಜಿನಿಯರ್ ದಂಪತಿ ಮನೆ ಮೇಲೆ ಲೋಕಾ ದಾಳಿ! ಆಸ್ತಿ ಪತ್ರ, ಕಾರ್ ಕೀ ಹೊರಗೆಸೆದರು!

Edited By: ಸಾಧು ಶ್ರೀನಾಥ್​

Updated on: Aug 17, 2023 | 12:41 PM

Lokayukta Raid: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಕೆ.ಮಹೇಶ್, ಅವರ ಪತ್ನಿ BBMP ಎಇ ಹೆಚ್.ಭಾರತಿ ಮನೆ ಮೇಲೆ ದಾಳಿ ನಡೆದಿದೆ. ಮಹೇಶ್, ಭಾರತಿ ದಂಪತಿ​​ ಮನೆ ದಾವಣಗೆರೆಯ ಜಯನಗರದಲ್ಲಿದೆ. ಮಹೇಶ್, ಭಾರತಿ ದಂಪತಿ​​ ಮನೆಯಲ್ಲಿ ಪರಿಶೀಲನೆ ಮುಂದುವರಿದಿದೆ. ಲೋಕಾಯುಕ್ತ ಎಸ್ಪಿ ವಾಸುದೇವರಾಮ ನೇತೃತ್ವದಲ್ಲಿ ಶೋಧ ನಡೆದಿದೆ.

ಬೆಂಗಳೂರು/ಚಿತ್ರದುರ್ಗ/ ದಾವಣಗೆರೆ: ರಾಜ್ಯಾದ್ಯಂತ ನಾನಾ ಕಡೆ ಕಡು ಭ್ರಷ್ಟರ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಮಹೇಶ್, ಪತ್ನಿ BBMP ಎಇ ಹೆಚ್.ಭಾರತಿ ಮನೆ ಮೇಲೆಯೂ (Small Irrigation Department Engineer and BBMP Engineer couple House) ದಾಳಿ ನಡೆದಿದೆ. ಚಿತ್ರದುರ್ಗ, ದಾವಣಗೆರೆ ಜಿಲ್ಲೆಯಲ್ಲಿಯೂ ಲೋಕಾಯುಕ್ತ ಬೇಟೆ (Lokayukta Raid) ನಡೆದಿದೆ. ಆ ವೇಳೆ ಕುಟುಂಬ ಸದಸ್ಯರು ಆಸ್ತಿ ಪತ್ರ ಹಾಗೂ ಕಾರ್ ಕೀ ಗಳನ್ನ ಹೊರ ಎಸೆದಿರುವ ಘಟನೆಯೂ ನಡೆದಿದೆ. ಆದರೂ ಮನೆ ಸುತ್ತಾಡಿದ ಲೋಕಾಯುಕ್ತ ಪೊಲೀಸರು ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಮೂರು ಕಡೆ ಅಡಿಕೆ ತೋಟ, ‌ಒಂದು ಕೆಜಿ ಚಿನ್ನ ಹಾಗೂ 15 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ಆದಾಯಕಿಂತ ಒಂದು ಕೋಟಿ, 38 ಲಕ್ಷ 10 ಸಾವಿರ ರೂಪಾಯಿ ಹೆಚ್ಚುವರಿ ಆಸ್ತಿ ಗಳಿಕೆ ಮಾಡಿರುವುದನ್ನು ಪತ್ತೆ ಹಚ್ಚಿದ್ದಾರೆ. ಅಂದರೆ ಸುಮಾರು ಶೇ.185 ರಷ್ಟು ಆದಾಯ ಗಳಿಕೆಯಾಗಿದೆ.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಕೆ.ಮಹೇಶ್, ಅವರ ಪತ್ನಿ BBMP ಎಇ ಹೆಚ್.ಭಾರತಿ ಮನೆ ಮೇಲೆ ದಾಳಿ ನಡೆದಿದೆ. ಮಹೇಶ್, ಭಾರತಿ ದಂಪತಿ​​ ಮನೆ ದಾವಣಗೆರೆಯ ಜಯನಗರದಲ್ಲಿದೆ. ಮಹೇಶ್, ಭಾರತಿ ದಂಪತಿ​​ ಮನೆಯಲ್ಲಿ ಪರಿಶೀಲನೆ ಮುಂದುವರಿದಿದೆ. ಲೋಕಾಯುಕ್ತ ಎಸ್ಪಿ ವಾಸುದೇವರಾಮ ನೇತೃತ್ವದಲ್ಲಿ ಶೋಧ ನಡೆದಿದೆ.

ಚಿಕ್ಕಜಾಲದ ಮಾಜಿ ಗ್ರಾಮ ಪಂಚಾಯತ್​ ಅಧ್ಯಕ್ಷ ಮನೆ ಮೇಲೆ ದಾಳಿ

ಇನ್ನು ಇತ್ತ ಬೆಂಗಳೂರು ನಗರ ಜಿಲ್ಲೆ ಉತ್ತರ ತಾಲೂಕಿನ ಚಿಕ್ಕಜಾಲದ ಮಾಜಿ ಗ್ರಾಮ ಪಂಚಾಯತ್​ ಅಧ್ಯಕ್ಷ ಹಾಲಿ ಸದಸ್ಯ ಲಕ್ಷ್ಮೀಪತಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಚಿಕ್ಕಜಾಲದ ಮನೆಯಲ್ಲಿ ಶೋಧ ಕಾರ್ಯ ಮುಂದುವರೆದಿದೆ. ಕೋಲಾರ ಲೋಕಾಯುಕ್ತ ಡಿವೈಎಸ್ಪಿ ಸೂರ್ಯನಾರಾಯಣರಾವ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ದಾಳಿ ವೇಳೆ 20 ಎಕರೆ ಜಮೀನು 5 ಸೈಟ್ಗಳ ದಾಖಲೆಗಳು ಒಂದು ಲಾಕರ್ ಪತ್ತೆಯಾಗಿದೆ. ಬೆಂಗಳೂರು ಸುತ್ತಾಮುತ್ತ ಕೋಟಿ ಕೋಟಿ ಬೆಲೆ ಬಾಳುವ ಜಮೀನು ಮತ್ತು ಸೈಟ್ ಗಳನ್ನು ಹೊಂದಿರುವ ಆಪಾದನೆಯಿದೆ. ಅಧಿಕಾರಿಗಳು ಜಮೀನು ದಾಖಲೆಗಳ ಪರಿಶೀಲನೆ ಮಾಡ್ತಿದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More