Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಾಯುಕ್ತ ಬಲೆಗೆ ಮತ್ತೊಬ್ಬ ಪಾಲಿಕೆ ಅಧಿಕಾರಿ, ಕಾರಿಂದ ದಾಖಲೆಯಿಲ್ಲದ ಹಣ ಬರಾಮತ್ತು

ಲೋಕಾಯುಕ್ತ ಬಲೆಗೆ ಮತ್ತೊಬ್ಬ ಪಾಲಿಕೆ ಅಧಿಕಾರಿ, ಕಾರಿಂದ ದಾಖಲೆಯಿಲ್ಲದ ಹಣ ಬರಾಮತ್ತು

ಅರುಣ್​ ಕುಮಾರ್​ ಬೆಳ್ಳಿ
|

Updated on: Jan 11, 2025 | 10:36 AM

ಸರ್ಕಾರೀ ನೌಕರರಿಗೆ ಇವತ್ತಿನ ದಿನಗಳಲ್ಲಿ ಉತ್ತಮ ಸಂಬಳ ಸಿಗುತ್ತಿದೆ, ಮೊದಲಿನ ದಿನಗಳಿಗೆ ಹೋಲಿಸಿ ನೋಡಿದರೆ ಪರಿಸ್ಥಿತಿ ಬಹಳ ಬದಲಾಗಿದೆ. ಸರ್ಕಾರೀ ಶಾಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕರು ತಮ್ಮ ಸಂಬಳಗಳಲ್ಲಿ ಮಕ್ಕಳನ್ನು ಓದಿಸಿ ಮನೆಗಳನ್ನು ಸಹ ಕಟ್ಟಿಸಿಕೊಳ್ಳುತ್ತಿದ್ದಾರೆ. ಅವರಿಗೆ ಸಂಬಳದ ಹೊರತಾಗಿ ‘ಮೇಲಿನ’ ಆದಾಯ ಇರೋದಿಲ್ಲ. ಬೇರೆ ಇಲಾಖೆಯವರಿಗೆ ದುಡ್ಡಿನ ಮೇಲೆ ಅದ್ಯಾಕೆ ಅಷ್ಟು ವ್ಯಾಮೋಹವೋ?

ಬೆಂಗಳೂರು: ಭ್ರಷ್ಟ ಮಿಕಗಳು ಲೋಕಾಯುಕ್ತ ಬಲೆಗೆ ಬೀಳುವುದು ಮುಂದುವರಿದಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಾಸರಹಳ್ಳಿ ವಲಯ ಕಚೇರಿ ಮೇಲೆ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ಯದುಕೃಷ್ಣ ಹೆಸರಿನ ಅಧಿಕಾರಿಯೊಬ್ಬರನ್ನು ಲಂಚದ ದುಡ್ಡು ಸಮೇತ ಬಲೆಗೆ ಕೆಡವಿದ್ದಾರೆ. ಯದುಕೃಷ್ಣ ಕಾಮಗಾರಿ ಟೆಂಡರ್ ವಿಭಾಗದಲ್ಲಿ ಎಕ್ಸಿಕ್ಯೂಟಿವ್ ಇಂಜಿನೀಯರ್ ಆಗಿ ಕೆಲಸ ಮಾಡುತ್ತಾರೆ. ಲೋಕಾಯುಕ್ತ ಪೊಲೀಸರು ಯದುಕೃಷ್ಣಗೆ ಸೇರಿದ ಕಾರಿಂದ ದಾಖಲೆಯಿಲ್ಲದ ₹ 2.06 ಲಕ್ಷ ಹಣವನ್ನು ವಶಪಡಿಸಿಕೊಂಡಿದ್ದಾರೆ. ಅವರ ಚೇಂಬರ್ ನಲ್ಲಿ ಲೋಕಾಯುಕ್ತ ಅಧಿಕಾರಿಗಳು ಹಣ ಎಣಿಸುತ್ತಿರುವುದನ್ನು ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಅಮ್ಮನ ಬದಲು ಮಗ ಕೆಲಸಕ್ಕೆ ಹಾಜರ್: ಲೋಕಾಯುಕ್ತ ದಾಳಿ ವೇಳೆ ಬಯಲು