Nelamangala: ಲಂಚ ಸ್ವೀಕರಿಸುತ್ತಿದ್ದ ಅಗಳಕುಪ್ಪೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲೋಕಾಯಕ್ತ ಅಧಿಕಾರಿಗಳ ಬಲೆಗೆ

ಅರುಣ್​ ಕುಮಾರ್​ ಬೆಳ್ಳಿ

Updated on: Jun 08, 2023 | 1:17 PM

ನರಸಿಂಹಮೂರ್ತಿ ನೆಲಮಂಗಲದ ಪ್ರವಾಸಿ ಮಂದಿರದಲ್ಲಿ ವ್ಯವಹಾರ ಕುದುರಿಸುವಾಗ ಲೋಕಾಯುಕ್ತ ಡಿವೈ ಎಸ್ ಪಿ ರೇಣುಕಾಪ್ರಸಾದ್ ನೇತೃತ್ವದ ತಂಡ ದಾಳಿ ನಡೆಸಿದೆ.

ನೆಲಮಂಗಲ: ಇತ್ತೀಚಿನ ದಿನಗಳಲ್ಲಿ ಲೋಕಾಯುಕ್ತ (Lokayukta) ದಾಳಿಗಳು ನಿಸ್ಸಂದೇಹವಾಗಿ ಹೆಚ್ಚುತ್ತಿವೆ. ತಾಲ್ಲೂಕಿನ ಅಗಳಕುಪ್ಪೆ ಗ್ರಾಮ ಪಂಚಾಯಿತಿಯ ಪಿಡಿಓ (PDO) ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಲೇಟೆಸ್ಟ್ ಸರ್ಕಾರೀ ನೌಕರ. ಮೂಲಗಳ ಪ್ರಕಾರ ಪಿಡಿಓ ನರಸಿಂಹಮೂರ್ತಿ (Narasimha Murthy) ಖಾತೆ ಮಾಡಿಕೊಡಲು ಸಾರ್ವಜನಿಕರಿಂದ ಹಣ ಪಡೆಯುತ್ತಿದ್ದಾಗ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ದಾಳಿ ನಡೆದಾಗ ಅವರ ಬಳಿ ರೂ. 2 ಲಕ್ಷ ಹಣವಿತ್ತು. ನರಸಿಂಹಮೂರ್ತಿ ನೆಲಮಂಗಲದ ಪ್ರವಾಸಿ ಮಂದಿರದಲ್ಲಿ ವ್ಯವಹಾರ ಕುದುರಿಸುವಾಗ ಲೋಕಾಯುಕ್ತ ಡಿವೈ ಎಸ್ ಪಿ ರೇಣುಕಾಪ್ರಸಾದ್ ನೇತೃತ್ವದ ತಂಡ ದಾಳಿ ನಡೆಸಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.